janadhvani

Kannada Online News Paper

ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು

ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಉಳ್ಳಾಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಳ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್‌ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.