ರಿಯಾದ್: ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಷ ನಕಿಯಾದಲ್ಲಿ ಮಲಯಾಳಿ ಟ್ಯಾಕ್ಸಿ ಚಾಲಕರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಮೃತರನ್ನು ಕಾಸರಗೋಡು ಏಣಿಯಾಡಿ ನಿವಾಸಿ ಕುಂಬಕ್ಕೋಡ್ ಮಂಝಿಲ್ ಮುಹಮ್ಮದ್ ಬಶೀರ್(42) ಎಂದು ಗುರುತಿಸಲಾಗಿದೆ. ಬಿಶಾದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ರಸ್ತೆಯಲ್ಲಿ ರವಿವಾರ ಮಧ್ಯರಾತ್ರಿಯ ಸುಮಾರಿಗೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಕೋರರು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಆರಂಭದಲ್ಲಿ ಹೌಸ್ ಡ್ರೈವರ್ ವೀಸಾದ ಮೇಲೆ ಸೌದಿಗೆ ಆಗಮಿಸಿದ್ದ ಬಷೀರ್ ಅವರು, ಕಳೆದ 13 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಬಿಶಾ ಪ್ರದೇಶದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಷೀರ್, ತನ್ನ ನಿವಾಸದ ಬಳಿ ತನ್ನ ಟ್ಯಾಕ್ಸಿಯನ್ನು ಸ್ವಚ್ಛಗೊಳಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಗುಂಡಿನ ದಾಳಿ ಕೇಳಿ ಸುತ್ತಮುತ್ತಲಿನ ಪ್ರದೇಶದ ಜನ ಒಮ್ಮೆಲೇ ಬೆಚ್ಚಿಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿ ನೋಡಿದಾಗ ಬಷೀರ್ ಅವರು ಕಾರಿನೊಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅದನ್ನು ಕಂಡ ಈಜಿಪ್ಟ್ ನಾಗರಿಕರೋರ್ವರು ಬಷೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಆ ವೇಳೆದಾಗಲೇ ಬಷೀರ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದು ಬಂದಿದೆ.
ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಮತ್ತು ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ವ್ಯಕ್ತಿಗಳು ವಾಹನದಲ್ಲಿ ಬಂದು ಬಷೀರ್ ಅವರ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಡೆದ ಪ್ರದೇಶದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಈ ಕುರಿತು ಸ್ಥಳೀಯ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.
ಬಷೀರ್ ಅವರು ಐಸಿಎಫ್ನ ಕಾರ್ಯಕರ್ತರಾಗಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳು, ಪೋಷಕರನ್ನು ಅಗಲಿದ್ದಾರೆ. ಮೃತದೇಹವನ್ನು ಕಾಸರಗೋಡಿಗೆ ಕಳುಹಿಸುವ ಕಾರ್ಯ ಪ್ರಗತಿಯಲ್ಲಿದೆ. ಸಾಮಾಜಿಕ ಹೋರಾಟಗಾರರಾದ ಅಬ್ದುಲ್ ಅಝೀಝ್ ಪದಿಪರಂಬನ್ ಮತ್ತು ಮುಜೀಬ್ ಸಖಾಫಿ ಅವರು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ