ಮಂಗಳೂರು:ದ್ವೇಶ ಭಾಷಣ, ಸರಣಿ ಕೊಲೆ, ಅಲ್ಪಸಂಖ್ಯಾತರ ಮೇಲೆ ಹತ್ಯೆಗೆ ಯತ್ನ ಮುಂತಾದ ಪ್ರಕರಣಗಳಿಂದ ತತ್ತರಿಸಿರುವ ದ.ಕ.ಜಿಲ್ಲೆಗೆ ಮುಖ್ಯಮಂತ್ರಿಯವರ ನಿರ್ದೇಶನ ಮೇರೆಗೆ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗಮಿಸಲಿದ್ದಾರೆ.ಜೂ. 5 ರ ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿ.ಕೆ. ಹರಿಪ್ರಸಾದ್, ಎರಡು ದಿನಗಳ ಕಾಲ ಮಂಗಳೂರಿನ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆ ವೇಳೆ ನಗರಕ್ಕೆ ಆಗಮಿಸಲಿರುವ ಅವರು, ಮೊದಲಿಗೆ ಸರ್ಕ್ಯೂಟ್ ಹೌಸ್ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕುದ್ರೋಳಿ ದೇಗುಲಕ್ಕೆ ಭೇಟಿ, ಕಂಕನಾಡಿಯಲ್ಲಿ ಖಾಝಿಗಳು ಹಾಗೂ ಉಲಮಾ ಕೋರ್ಡಿನೇಶನ್ ನಾಯಕರ ಭೇಟಿ ಬಳಿಕ ಇತ್ತೀಚೆಗೆ ಗುಡ್ಡ ಕುಸಿದು ಮೃತಪಟ್ಟವರ ಮನೆಗಳಿಗೆ ಭೇಟಿ, ಕೋಮು ದ್ವೇಷಕ್ಕೆ ಬಲಿಯಾದ ಅಮಾಯಕ ಅಬ್ದುಲ್ ರಹಿಮಾನ್ ಮನೆಗೆ ಭೇಟಿ ನೀಡಲಿದ್ದಾರೆ. ಶುಕ್ರವಾರ ದಿನವಿಡೀ ನಗರದಲ್ಲಿರುವ ಅವರು ಬಳಿಕ ಸಾಯಂಕಾಲ ವೇಳೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಇತ್ತೀಚೆಗೆ ಅಬ್ದುಲ್ ರಹಿಮಾನ್ ಹತ್ಯೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಕರಾವಳಿಯ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳು, ಹಿಂಸೆಯ ಘಟನೆಗಳು, ಪ್ರಚೋದನಕಾರಿ ಭಾಷಣಗಳು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಇತ್ಯಾದಿಗಳ ಬಗ್ಗೆ ಗಂಭೀರ ಚರ್ಚೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ತಕ್ಷಣ ಕಡಿವಾಣ ಹಾಕಲು ಹಾಗು ಅಲ್ಲಿನ ಪೊಲೀಸ್ ವ್ಯವಸ್ಥೆಗೆ ಕಾಯಕಲ್ಪ ನೀಡಲು ಏನು ಮಾಡಬಹುದು ಎಂಬ ಬಗ್ಗೆ ಮುಖ್ಯಮಂತ್ರಿಗಳು ಬಿ ಕೆ ಹರಿಪ್ರಸಾದ್ ಅವರ ಸಲಹೆ ಪಡೆದಿದ್ದರು . ತಕ್ಷಣದ ಕ್ರಮವಾಗಿ ಜಿಲ್ಲೆಯ ಎಸ್ಪಿ ಹಾಗು ಮಂಗಳೂರಿನ ಪೊಲೀಸ್ ಕಮಿಷನರ್ ಇಬ್ಬರನ್ನೂ ಬದಲಾಯಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿತ್ತು. ಅದರಂತೆ, ಪೋಲೀಸ್ ಇಲಾಖೆಯಲ್ಲಿ ಬದಲಾವಣೆ ತರಲಾಗಿತ್ತು.
ಮುಖ್ಯಮಂತ್ರಿ ಮತ್ತು ಬಿ.ಕೆ. ಹರಿಪ್ರಸಾದ್ ನಡುವಿನ ಚರ್ಚೆ ನಡೆದು ಒಂದು ವಾರದ ಬಳಿಕ ಇದೀಗ ಬಿಕೆ ಹರಿಪ್ರಸಾದ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಶರಫುಲ್ ಉಲಮಾ ಉಸ್ತಾದ್ 7ನೇ ವಾರ್ಷಿಕ ಅನುಸ್ಮರಣೆ – ಮೇ 13, 14 ರಂದು ಪ್ರಾರ್ಥನಾ ಸಂಗಮ
“ನಿಮ್ಮವರೇ ಹೀಗೆ” – ಕೆಎಸ್ಆರ್ಟಿಸಿ ನಿರ್ವಾಹಕನ ನಡತೆಗೆ ಶಿಕ್ಷಕಿಯ ಮನದ ಅಳಲು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?