ಉಳ್ಳಾಲ, ಜೂ.4 : ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಅನಾಮಧೇಯ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು ಧಾವಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಕ್ಯಾಂಪಸನ್ನ ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಕೊನೆಗೆ, ಇದೊಂದು ಹುಸಿ ಬಾಂಬ್ ಕರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಹೆರಿಗೆ ವಿಭಾಗದ ಸ್ಥಿರ ದೂರವಾಣಿಗೆ ಕರೆಯೊಂದು ಬಂದಿದೆ. ಪಿಜಿ ವಿದ್ಯಾರ್ಥಿನಿಯೋರ್ವಳು ಕರೆಯನ್ನ ಸ್ವೀಕರಿಸಿದ್ದು ಇಂಗ್ಲೀಷಲ್ಲಿ ಮಾತನಾಡಿದ ವ್ಯಕ್ತಿಯೋರ್ವ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಲ್ಲಿ ಬಾಂಬ್ ಸ್ಪೋಟಿಸುವುದಾಗಿ ಹೇಳಿದ್ದು ಎಲ್ಲರನ್ನು ಕೂಡಲೇ ಆಸ್ಪತ್ರೆಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದಾನೆ.
ಆನಂತರವೂ ನಾಲೈದು ಬಾರಿ ಕರೆ ಬಂದಿದ್ದು, ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರೆ ಬಂದ ನಂಬರ್ ಗಳನ್ನು ಪರಿಶೀಲಿಸಿ ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ