ಸೌದಿ ಅರೇಬಿಯಾ: ದಮ್ಮಾಮ್ ಝೋನಲ್ ಅಧೀನದಲ್ಲಿರುವ ಅಲ್ ಅಹ್ಸಾ. ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ವತಿಯಿಂದ ಅದ್ದೂರಿಯಾಗಿ ‘ಈದ್ ಮೀಟ್’ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೆಕ್ಟರ್ ಅಧ್ಯಕ್ಷ ಮೌಲಾನ ಅಬ್ದುಲ್ ಮಜೀದ್ ಸಖಾಫಿ ವಹಿಸಿ ‘ಈದ್ ಸಂದೇಶ’ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮತೀಯ ಗಲಭೆಯಿಂದ ನಲುಗಿದ ದ.ಕ.ಜಿಲ್ಲೆಗೆ ಶಾಂತಿಯ ಸಂದೇಶವಾಗಿ
“ಧ್ವೇಷ ಅಳಿಯಲಿ
ಪ್ರೀತಿ ಮೂಡಲಿ”
“ದ್ವೇಷ ಅಳಿಸೋಣ
ದೇಶ ಕಟ್ಟೋಣ”
“ಕೋಮು ದ್ವೇಷ
ನಾಡಿಗೆ ನಾಶ”
“ಭೀತಿಯಿಂದ ಉನ್ಮಾದ
ಶಾಂತಿಯಿಂದ ಆನಂದ” ಎಂಬಿತ್ಯಾದಿ ಶಾಂತಿ, ಸೌಹಾರ್ದ, ಸಹಬಾಳ್ವೆಯ ಕುರಿತಾದ
ಭಿತ್ತಿ ಪತ್ರ ಪ್ರದರ್ಶನ ಮಾಡಲಾಯಿತು.
ಕಾರ್ಯಕ್ರಮದಲ್ಲಿ
ಅಬ್ದುರ್ರಹ್ಮಾನ್ ಕೈರಂಗಳ, ಫಾರೂಖ್ ಸಅದಿ ಮಾಡಾವು ಅವರ ತಾಯಿ ಹಾಗೂ
ಇತ್ತೀಚೆಗೆ ಗೂಂಡಾಗಳಿಂದ ಹತ್ಯೆಯಾದ ಅಬ್ದುಲ್ ರಹೀಮ್ ಕೊಳ್ತಮಜಲ್ ಹೆಸರಲ್ಲಿ ತಹ್ಲೀಲ್ ಹೇಳಿ ಸಮರ್ಪಿಸಲಾಯಿತು.
ಕಾರ್ಯಕ್ರಮವನ್ನು ಸೆಕ್ಟರ್ ಪ್ರ.ಕಾರ್ಯದರ್ಶಿ ಆಸೀಫ್ ಕಾಟಿಪಳ್ಳ ಸ್ವಾಗತಿಸಿ ಇಸ್ಹಾಕ್ ಫಜೀರ್ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ