ಮಂಗಳೂರು: ಸರಕಾರ ಮತ್ತು ಪೊಲೀಸರ ನಡೆಯನ್ನು ಪ್ರಶ್ನಿಸುವ ಸಂದೇಶವೊಂದನ್ನು ಫಾರ್ವರ್ಡ್ ಮಾಡಿದ ಕಾರಣಕ್ಕೆ ಸಮಾಜ ಸೇವಕ, ಸುನ್ನೀ ಸಂಘಟಕ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಅಶ್ರಫ್ ಕಿನಾರಾ ಮೇಲೆ ಕೇಸು ದಾಖಲಿಸಿರುವುದನ್ನು ಕರ್ನಾಟಕ ಉಲಮಾ ಕೋ ಆರ್ಡಿನೇಷನ್ ತೀವ್ರವಾಗಿ ಖಂಡಿಸಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯವಾಗಿದೆ. ಮುಸ್ಲಿಮರ ಪವಿತ್ರ ಹಬ್ಬವಾದ ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ನಡೆಯನ್ನು ಪ್ರಶ್ನಿಸುವ ವಾಟ್ಸ್ ಆ್ಯಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಯನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳನ ಮಾಡಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರವಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕೂಲಂಕಷ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರತರಬೇಕು ಎಂದು ಉಲಮಾ ಕೋ ಆರ್ಡಿನೇಷನ್ ಆಗ್ರಹಿಸಿದೆ.
ಅಶ್ರಫ್ ಕಿನಾರ ಅವರು ಉಲಮಾ ಕೋ ಆರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಆಸಕ್ತಿ ತೋರದ ಪೊಲೀಸರು, ವಾಟ್ಸ್ ಆ್ಯಪ್ ಸಂದೇಶವೊಂದರ ಹಿಂದೆ ಬಿದ್ದು ಕೇಸ್ ದಾಖಲಿಸಿರುವುದು ಹಾಸ್ಯಾಸ್ಪದ. ತಕ್ಷಣ ಅವರ ಮೇಲಿನ ಕೇಸ್ ಹಿಂಪಡೆಯ ಬೇಕು ಎಂದು ಉಲಮಾ ಕೋ ಆರ್ಡಿನೇಷನ್ ಅಧ್ಯಕ್ಷ ಸಯ್ಯಿದ್ ಇಸ್ಮಾಯೀಲ್ ತಂಙಳ್ ಉಜಿರೆ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಎಂ.ಶರೀಫ್ ಫೈಝಿ ಕಡಬ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ