ಬೆಳ್ತಂಗಡಿ: ಸರ್ಕಾರ ಮತ್ತು ಪೊಲೀಸರ ನಡೆಯನ್ನು ಪ್ರಶ್ನಿಸುವ ಸಂದೇಶವೊಂದನ್ನು ಫಾರ್ವರ್ಡ್ ಮಾಡಿದ ಕಾರಣಕ್ಕೆ ಸಮಾಜ ಸೇವಕ,ಸುನ್ನೀ ಸಂಘಟಕ, ದ. ಕ. ಜಿಲ್ಲಾ ವಖ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಅಶ್ರಫ್ ಕಿನಾರಾ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಸುನ್ನೀ ಕೋರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ
ತೀವ್ರವಾಗಿ ಖಂಡಿಸಿದೆ.
ಅಭಿಪ್ರಾಯ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಮೂಲಭೂತ ಹಕ್ಕು. ಆಡಳಿತಗಾರರ ತಪ್ಪುಗಳನ್ನು ಟೀಕಿಸಬೇಕಾದುದು ಜವಾಬ್ದಾರಿಯುತ ನಾಗರಿಕರ ಕರ್ತವ್ಯ. ಮುಸ್ಲಿಮರ ಪವಿತ್ರ ಹಬ್ಬವಾದ ಬಕ್ರೀದ್ ದಿನ ಬಲಿದಾನಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆದುಕೊಂಡ ರೀತಿ ಮತ್ತು ಸರಕಾರದ ಅನಾಸ್ಥೆಯನ್ನು ಪ್ರಶ್ನಿಸುವ ವಾಟ್ಸಪ್ ಸಂದೇಶವನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳನ್ನೋ, ವಿಧಾನ ಸಭಾಧ್ಯಕ್ಷರನ್ನೋ ಉಲ್ಲೇಖಿಸಿಲ್ಲ. ಆದಾಗ್ಯೂ ಮುಖ್ಯಮಂತ್ರಿ ಮತ್ತು ಸ್ಪೀಕರ್ ಅವರನ್ನು ಅವಹೇಳಿಸಿದ ಆರೋಪ ಹೊರಿಸಲಾಗಿದೆ. ಇದರ ಹಿಂದೆ ಯಾವುದೋ ಷಡ್ಯಂತ್ರಗಳಿದ್ದು, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಕೂಲಂಕಷ ತನಿಖೆ ನಡೆಸಿ ಸತ್ಯಾವಸ್ಥೆಯನ್ನು ಹೊರತರಬೇಕು ಎಂದು ಸುನ್ನೀ ಕೋರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸಿದೆ.
ಉಲಮಾ ಕೋರ್ಡಿನೇಷನ್ ಅಧೀನದಲ್ಲಿ ನಡೆದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನಾ ಸಮ್ಮೇಳನದ ಸಂಚಾಲಕ ಸೇರಿದಂತೆ ವಿವಿಧ ಸಮಾಜ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಶ್ರಫ್ ಕಿನಾರ ಅವರು ಬಡವರು, ರೋಗಿಗಳು, ಅಪಘಾತಕ್ಕೀಡಾದವರು ಸೇರಿದಂತೆ ನೊಂದವರ ಪರವಾಗಿ ರಾತ್ರಿ ಹಗಲೆನ್ನದೆ ದುಡಿಯುತ್ತಿದ್ದಾರೆ. ಅಂತಹವರ ಮೇಲೆ ಕ್ಷುಲ್ಲಕ ಆರೋಪ ಹೊರಿಸಿ ದುರ್ಬಲಗೊಳಿಸುವುದು ಸರಿಯಲ್ಲ. ಬಹಿರಂಗ ವೇದಿಕೆಗಳಲ್ಲಿ ಮತ ವಿಭಾಗಗಳನ್ನು ಪರಸ್ಪರ ಎತ್ತಿ ಕಟ್ಟುವಂತೆ ಉದ್ರೇಕಕಾರಿ ಭಾಷಣ ಮಾಡಿದವರನ್ನು ಬಂಧಿಸಲು ಆಸಕ್ತಿ ತೋರದ ಪೊಲೀಸರು, ವಾಟ್ಸಪ್ ಸಂದೇಶ ಒಂದರ ಹಿಂದೆ ಬಿದ್ದು ಕೇಸು ದಾಖಲಿಸಿರುವುದು ಹಾಸ್ಯಾಸ್ಪದ. ತಕ್ಷಣ ಅವರ ಮೇಲಿನ ಕೇಸ್ ವಾಪಾಸ್ ಪಡೆಯ ಬೇಕೆಂದು ಸುನ್ನೀ ಕೋರ್ಡಿನೇಷನ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಬ್ದುರ್ರಹ್ಮಾನ್ ಸಾದತ್ ಬಾಅಲವಿ ತಂಙಳ್ ಉಳ್ತೂರು , ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ