ಮಾಣಿ : ಯಾವುದೇ ಒಳ್ಳೆಯ ಕಾರ್ಯವನ್ನು ಆರಂಭಿಸುವಾಗ ನಮ್ಮ ನಿಯ್ಯತ್ತು ಒಳ್ಳೆಯದಾಗಿರಬೇಕು. ನಿಯ್ಯತ್ತು ಒಳ್ಳೆಯದಾದರೆ ನಮ್ಮ ಮನೆ, ನಾಡು, ಸಂಘಟನೆಯು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಖಾಝಿ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದರು ಹೇಳಿದರು. ಅವರು ದಿನಾಂಕ 01.06.2025ರಂದು ದಾರುಲ್ ಇರ್ಶಾದ್ ಕಟ್ಟಡದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಮಾಣಿ ಸರ್ಕಲ್ ನ ನೂತನ ಕಛೇರಿ ಉದ್ಘಾಟಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಮಾಣಿ ಸರ್ಕಲ್ ಅಧ್ಯಕ್ಷರಾದ ಯೂಸುಫ್ ಹಾಜಿ ಸೂರಿಕುಮೇರ್ ರವರು ವಹಿಸಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ದಅವಾ ಕಾರ್ಯದರ್ಶಿ ಅಬ್ದುಲ್ ಹಮೀದ್ ಸಖಾಫಿ ಪಾಡಿರವರು ಪ್ರಾಸ್ತಾವಿಕ ಮಾತನ್ನಾಡಿದರು. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ಕುಂಞಿ ಜೋಗಿಬೆಟ್ಟುರವರು ಶುಭ ಹಾರೈಸಿದರು.
ಉಳುಹಿಯ್ಯತ್ ತರಗತಿ : ಈ ಸಂಧರ್ಭದಲ್ಲಿ ಪವಿತ್ರ ದುಲ್ ಹಜ್ಜ್ ತಿಂಗಳ ವಿಶೇಷ ಕರ್ಮವಾದ ಉಳುಹಿಯ್ಯತ್ ಬಗ್ಗೆ ಅಲ್ ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ ಕುದುಂಬ್ಲಾಡಿ ಇದರ ಸಾರಥಿ ಮೌಲಾನಾ ಅಬ್ದುರ್ರಝ್ಝಾಕ್ ಮದನಿ ಕಾಮಿಲ್ ಸಖಾಫಿ ಉಸ್ತಾದರು ಸಮಗ್ರ ತರಗತಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು, ಜಿಲ್ಲಾ ಇಸಾಬ ಕಾರ್ಯದರ್ಶಿ ಹಾಗೂ ಸರ್ಕಲ್ ಉಸ್ತುವಾರಿ ಇಕ್ಬಾಲ್ ಬಪ್ಪಳಿಗೆ, ಜಿಲ್ಲಾ ನಾಯಕರಾದ ಕೆ. ಬಿ. ಕಾಸಿಂ ಹಾಜಿ ಪರ್ಲೋಟ್ಟು, ಉಸ್ಮಾನ್ ಹಾಜಿ ಸೆರ್ಕಳ, ರಾಜ್ಯ ಕಛೇರಿ ಕಾರ್ಯದರ್ಶಿ ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ, ಎಸ್ವೈಎಸ್ ಜಿಲ್ಲಾ ನಾಯಕರಾದ ಹೈದರ್ ಸಖಾಫಿ ಬುಡೋಳಿ, ದಾರುಲ್ ಇರ್ಶಾದ್ ಅಧ್ಯಾಪಕರಾದ ನಝೀರ್ ಅಮ್ಜದಿ, ಮುಹಮ್ಮದ್ ಕಮಾಲ್ ಮದೀನಿ, ಸರ್ಕಲ್ ನಾಯಕರಾದ ದಾವೂದ್ ಕಲ್ಲಡ್ಕ, ಝಕರಿಯಾ ಮುಸ್ಲಿಯಾರ್ ಕಲ್ಲಡ್ಕ, ಹಂಝ ಸೂರಿಕುಮೇರ್, ಯೂಸುಫ್ ಪಾಟ್ರಕೋಡಿ, ಅಬ್ದುಲ್ ಕಾಸಿಂ ಪಾಟ್ರಕೋಡಿ, ಮುಹಮ್ಮದ್ ಹಬೀಬ್ ಶೇರಾ, ಇಸ್ಮಾಯಿಲ್ ಹಾಜಿ ಬುಡೋಳಿ, ಇಬ್ರಾಹಿಂ ಮದನಿ ಶೇರಾ, ಅಬ್ದುಲ್ ಖಾದರ್ ಹಾಜಿ ಶೇರಾ, ಅಬ್ದುಲ್ ಖಾದರ್ ಮಿತ್ತೂರು, ಸೆಲೀಂ ಮಾಣಿ, ಸಾಬಿತ್ ಪಾಟ್ರಕೋಡಿ, ಸಾಜಿದ್ ಪಾಟ್ರಕೋಡಿ, ಕೆಸಿಎಫ್ ನಾಯಕರಾದ ಮುಹಮ್ಮದ್ ಹಾರಿಸ್ ಸೂರಿಕುಮೇರ್ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೂಸುಫ್ ಸಯೀದ್ ಪುತ್ತೂರುರವರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಂ ನೆಲ್ಲಿ ಧನ್ಯವಾದಗೈದರು.
ವರದಿ: ಸಲೀಂ ಮಾಣಿ
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ