janadhvani

Kannada Online News Paper

ಕುತ್ತಾರು:12 ನೇ ಮಹಡಿಯಿಂದ ಕೆಳಗೆ ಬಿದ್ದು 10 ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮರ್ಜಹಾ ಬಾನು ಇವರ ಹಿರಿಯ ಪುತ್ರಿ ಹಿಬಾ ಐಮನ್

ಉಳ್ಳಾಲ, ಜೂ.13 : ಇಲ್ಲಿನ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಸಂಭವಿಸಿದೆ.

ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹಮ್ಮದ್ ಮತ್ತು ಖಮರ್ಜಹಾ ಬಾನು ಇವರ ಹಿರಿಯ ಪುತ್ರಿ ಹಿಬಾ ಐಮನ್ (15) ಮೃತಪಟ್ಟ ಬಾಲಕಿ. 18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸವಿದ್ದರು.

ನಿನ್ನೆ ರಾತ್ರಿ ದಂಪತಿ ಇಬ್ಬರೂ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು. ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರೆನ್ನಲಾಗಿದೆ. ಈ ವೇಳೆ ಹಿಬಾ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕಲೆಂದು ಕುರ್ಚಿಯಲ್ಲಿ ನಿಂತಿದ್ದ ವೇಳೆ ಆಯತಪ್ಪಿ ವಸತಿ ಸಂಕೀರ್ಣದಿಂದ ಕೆಳಗಡೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಿಬಾ ಮಂಗಳೂರಿನ ಯೆನೆಪೊಯ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು, ಈ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.