ದಮ್ಮಾಮ್ | ಸೌದಿ ಅರೇಬಿಯಾದಿಂದ ಹೊರಡುವ ಪ್ರಯಾಣಿಕರಿಗೆ ದೇಶದ ವಿಮಾನ ನಿಲ್ದಾಣಗಳು ಸುತ್ತೋಲೆ ಹೊರಡಿಸಿವೆ. ವಿಮಾನ ನಿಲ್ದಾಣಕ್ಕೆ ತೆರಳುವ ಮುಂಚಿತವಾಗಿ ಸಂಬಂಧಿತ ವಿಮಾನಯಾನ ಸಂಸ್ಥೆಗಳೊಂದಿಗೆ ನೇರವಾಗಿ ಸಂವಹನ ನಡೆಸುವಂತೆ ಅಧಿಕಾರಿಗಳು ಪ್ರಯಾಣಿಕರಿಗೆ ಸೂಚಿಸಿದ್ದಾರೆ.
ಈ ಪ್ರದೇಶದಲ್ಲಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಈ ನಿರ್ದೇಶನ ಬಂದಿದೆ. ಪ್ರಸ್ತುತ ಬೆಳವಣಿಗೆಗಳು ಮತ್ತು ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಮುಂಜಾನೆ ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ವಾಯುಪ್ರದೇಶದಲ್ಲಿ ಸಂಘರ್ಷ ಉದ್ಭವಿಸಿದೆ. ಇದರ ನಂತರ,ಇರಾನ್, ಇರಾಕ್ ಮತ್ತು ಇಸ್ರೇಲ್ನಂತಹ ದೇಶಗಳ ಮೇಲಿನ ವಾಯುಪ್ರದೇಶದಿಂದ ವಿಮಾನಯಾನ ಸಂಸ್ಥೆಗಳು ಹಿಂದೆ ಸರಿದವು ಎಂದು ಫ್ಲೈಟ್ರಡಾರ್ 24 ದತ್ತಾಂಶ ದಾಖಲೆಗಳು ಹೇಳಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿರಿಸಲು ವಿಮಾನಗಳನ್ನು ಬೇರೆಡೆಗೆ ತಿರುಗಿಸಲು ಮತ್ತು ರದ್ದುಗೊಳಿಸಲು ಹೆಣಗಾಡುತ್ತಿದ್ದೇವೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.
ಸಂಘರ್ಷ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ಮುಚ್ಚಲಾದ ವಿಮಾನ ನಿಲ್ದಾಣಗಳೆಂದರೆ ರಿಯಾದ್ನ ಕಿಂಗ್ ಖಾಲಿದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಜೆದ್ದಾದ ಕಿಂಗ್ ಅಬ್ದುಲ್ ಅಝೀಝ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದಮ್ಮಾಮ್ನ ಕಿಂಗ್ ಫಹದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮದೀನಾದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ. ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯ ನಂತರ ಈ ಪ್ರದೇಶದಲ್ಲಿ ಅನಗತ್ಯ ಸಂಘರ್ಷದಿಂದಾಗಿ ಪ್ರಸ್ತುತ ವಾಯುಪ್ರದೇಶದ ಸಮಸ್ಯೆಗಳು ಉಂಟಾಗಿವೆ.

ಹಜ್ ಯಾತ್ರೆಗಾಗಿ ಪವಿತ್ರ ಭೂಮಿಗೆ ಆಗಮಿಸಿರುವ ಭಾರತೀಯರು ಸೇರಿದಂತೆ ಸಾವಿರಾರು ಯಾತ್ರಿಕರು ಮಕ್ಕಾ ಮತ್ತು ಮದೀನಾದಲ್ಲಿನ ಹೋಟೆಲ್ಗಳಲ್ಲಿ ತಂಗಿದ್ದಾರೆ. ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಜೋರ್ಡಾನ್ನ ವಾಯುಪ್ರದೇಶವನ್ನು ಮುಂದಿನ ಸೂಚನೆ ಬರುವವರೆಗೂ ಮುಚ್ಚಲಾಗಿದೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ