ಅಹ್ಮದಾಬಾದ್: ಕಳೆದ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಪ್ರಯಾಣಿಕರು ಸಹಿತ ಮೃತಪಟ್ಟವರ ಸಂಖೈ 274 ಕ್ಕೆ ಏರಿದೆ. ವಿಮಾನವು ಜನನಿಬಿಡ ವಸತಿ ಪ್ರದೇಶದಲ್ಲಿ ಪತನವಾಗಿದ್ದರಿಂದ ವಿಮಾನದ ಪ್ರಯಾಣಿಕರಲ್ಲದ 33 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೂ ಟಾಟಾ ಗ್ರೂಪ್ ಘೋಷಿಸಿದ ಪರಿಹಾರ ದೊರೆಯಲಿದೆ ಎಂದು ಟಾಟಾ ಗ್ರೂಪ್ ತಿಳಿಸಿದೆ.
ಟಾಟಾ ಗ್ರೂಪ್ ಪ್ರಕಾರ, ಮೃತಪಟ್ಟವರಲ್ಲಿ ಸೇರಿರುವ ವಿಮಾನ ಪ್ರಯಾಣಿಕರಲ್ಲದ ಜನರು ಒಂದು ಕೋಟಿ ರೂ. ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಅಪಘಾತದಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಟಾಟಾ ಕಂಪೆನಿ ಭರಿಸುತ್ತದೆ. ಗಾಯಗೊಂಡ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಸಹಾಯ ಸಿಗುವಂತೆ ಟಾಟಾ ಗ್ರೂಪ್ ನೋಡಿಕೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಟಾಟಾ ಗ್ರೂಪ್ ವಹಿಸಿಕೊಳ್ಳಲಿದೆ.
ಅಪಘಾತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರಲ್ಲಿ ವೈದ್ಯರು, ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಮೇಘನಿನಗರ ಪ್ರದೇಶದ ಸ್ಥಳೀಯ ನಿವಾಸಿಗಳು ಸೇರಿದ್ದಾರೆ ಎನ್ನಲಾಗಿದೆ.
ಡ್ರೀಮ್ಲೈನರ್ ಅಪಘಾತದಲ್ಲಿ ಡಿಕ್ಕಿ ಹೊಡೆದು ತೀವ್ರವಾಗಿ ಹಾನಿಗೊಳಗಾದ ಬಿ ಜೆ ಮೆಡಿಕಲ್ನ ಹಾಸ್ಟೆಲ್ನ ಪುನರ್ನಿರ್ಮಾಣದಲ್ಲಿ ಟಾಟಾ ಕಂಪೆನಿಯು ಸಹಕಾರ ನೀಡಲಿದೆ.
ವಿಮಾನದಲ್ಲಿದ್ದ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಅಪಘಾತದಲ್ಲಿ ಒಬ್ಬರು ಪ್ರಯಾಣಿಕರು ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಉಳಿದ 33 ಸಂತ್ರಸ್ತರು ಅಪಘಾತದ ಸಮಯದಲ್ಲಿ ಅಹಮದಾಬಾದ್ನ ಬಿಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿದ್ದ ವ್ಯಕ್ತಿಗಳಾಗಿರಬಹುದು ಎನ್ನಲಾಗಿದೆ.
ಹಣಕಾಸಿನ ಪರಿಹಾರವನ್ನು ಹೊರತುಪಡಿಸಿ ಹತ್ತಿರದ ಸಂಬಂಧಿಕರಿಗೆ ಉದ್ಯೋಗ ನೀಡುವಂತಹ ಯೋಜನೆಯ ಬಗ್ಗೆ ಟಾಟಾ ಗ್ರೂಪ್ ಯೋಚಿಸಿದೆಯೇ ಎಂದು ಅಧಿಕಾರಿಗಳನ್ನು ಕೇಳಿದಾಗ, “ಸದ್ಯಕ್ಕೆ ಏನನ್ನೂ ನಿರ್ಧರಿಸಲಾಗಿಲ್ಲ. ನಾವು ಇನ್ನೂ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದೇವೆ ಮತ್ತು ತನಿಖೆ ಪ್ರಾರಂಭವಾಗಿದೆ” ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಟಾಟಾ ಗ್ರೂಪ್ ಘೋಷಿಸಿದ ಒಂದು ಕೋಟಿ ರೂ.ಗಳ ಹೊರತಾಗಿ, ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಿಗೆ ವಿಮಾ ಕಂಪನಿಗಳಿಂದ ಸುಮಾರು 1.5 ಕೋಟಿ ರೂ.ಗಳ ಪರಿಹಾರವೂ ಸಿಗಲಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ