ಅಹ್ಮದಾಬಾದ್: ಕಳೆದ ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಪ್ರಯಾಣಿಕರು ಸಹಿತ ಮೃತಪಟ್ಟವರ ಸಂಖೈ 274 ಕ್ಕೆ ಏರಿದೆ. ವಿಮಾನವು ಜನನಿಬಿಡ ವಸತಿ ಪ್ರದೇಶದಲ್ಲಿ ಪತನವಾಗಿದ್ದರಿಂದ ವಿಮಾನದ ಪ್ರಯಾಣಿಕರಲ್ಲದ 33 ಮಂದಿ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೂ ಟಾಟಾ ಗ್ರೂಪ್ ಘೋಷಿಸಿದ ಪರಿಹಾರ ದೊರೆಯಲಿದೆ ಎಂದು ಟಾಟಾ ಗ್ರೂಪ್ ತಿಳಿಸಿದೆ.
ಟಾಟಾ ಗ್ರೂಪ್ ಪ್ರಕಾರ, ಮೃತಪಟ್ಟವರಲ್ಲಿ ಸೇರಿರುವ ವಿಮಾನ ಪ್ರಯಾಣಿಕರಲ್ಲದ ಜನರು ಒಂದು ಕೋಟಿ ರೂ. ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಅಪಘಾತದಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಟಾಟಾ ಕಂಪೆನಿ ಭರಿಸುತ್ತದೆ. ಗಾಯಗೊಂಡ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಸಹಾಯ ಸಿಗುವಂತೆ ಟಾಟಾ ಗ್ರೂಪ್ ನೋಡಿಕೊಳ್ಳಲಿದೆ. ಅದರ ಸಂಪೂರ್ಣ ಜವಾಬ್ದಾರಿಯನ್ನು ಟಾಟಾ ಗ್ರೂಪ್ ವಹಿಸಿಕೊಳ್ಳಲಿದೆ.
ಅಪಘಾತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರಲ್ಲಿ ವೈದ್ಯರು, ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಮತ್ತು ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವ ಮೇಘನಿನಗರ ಪ್ರದೇಶದ ಸ್ಥಳೀಯ ನಿವಾಸಿಗಳು ಸೇರಿದ್ದಾರೆ ಎನ್ನಲಾಗಿದೆ.
ಡ್ರೀಮ್ಲೈನರ್ ಅಪಘಾತದಲ್ಲಿ ಡಿಕ್ಕಿ ಹೊಡೆದು ತೀವ್ರವಾಗಿ ಹಾನಿಗೊಳಗಾದ ಬಿ ಜೆ ಮೆಡಿಕಲ್ನ ಹಾಸ್ಟೆಲ್ನ ಪುನರ್ನಿರ್ಮಾಣದಲ್ಲಿ ಟಾಟಾ ಕಂಪೆನಿಯು ಸಹಕಾರ ನೀಡಲಿದೆ.
ವಿಮಾನದಲ್ಲಿದ್ದ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಅಪಘಾತದಲ್ಲಿ ಒಬ್ಬರು ಪ್ರಯಾಣಿಕರು ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಉಳಿದ 33 ಸಂತ್ರಸ್ತರು ಅಪಘಾತದ ಸಮಯದಲ್ಲಿ ಅಹಮದಾಬಾದ್ನ ಬಿಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿದ್ದ ವ್ಯಕ್ತಿಗಳಾಗಿರಬಹುದು ಎನ್ನಲಾಗಿದೆ.
ಹಣಕಾಸಿನ ಪರಿಹಾರವನ್ನು ಹೊರತುಪಡಿಸಿ ಹತ್ತಿರದ ಸಂಬಂಧಿಕರಿಗೆ ಉದ್ಯೋಗ ನೀಡುವಂತಹ ಯೋಜನೆಯ ಬಗ್ಗೆ ಟಾಟಾ ಗ್ರೂಪ್ ಯೋಚಿಸಿದೆಯೇ ಎಂದು ಅಧಿಕಾರಿಗಳನ್ನು ಕೇಳಿದಾಗ, “ಸದ್ಯಕ್ಕೆ ಏನನ್ನೂ ನಿರ್ಧರಿಸಲಾಗಿಲ್ಲ. ನಾವು ಇನ್ನೂ ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದೇವೆ ಮತ್ತು ತನಿಖೆ ಪ್ರಾರಂಭವಾಗಿದೆ” ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಟಾಟಾ ಗ್ರೂಪ್ ಘೋಷಿಸಿದ ಒಂದು ಕೋಟಿ ರೂ.ಗಳ ಹೊರತಾಗಿ, ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಿಗೆ ವಿಮಾ ಕಂಪನಿಗಳಿಂದ ಸುಮಾರು 1.5 ಕೋಟಿ ರೂ.ಗಳ ಪರಿಹಾರವೂ ಸಿಗಲಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ