ಬೆಳ್ತಂಗಡಿ: ಜೂನ್ 15 SჄS ಬೆಳ್ತಂಗಡಿ ಝೋನ್ ಸಮಿತಿಯಿಂದ ಸ್ಮಾರ್ಟ್ ಲೀಡರ್ಸ್ ಕ್ಯಾಂಪ್ ನಿನ್ನೆ ಸಂಜೆ 6 ಗಂಟೆಗೆ ಸರಿಯಾಗಿ FM ಗಾರ್ಡನ್ ಗುರುವಾಯನಕೆರೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸುನ್ನೀ ಕೋ ಅರ್ಡಿನೇಶನ್ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದತ್ ಬಾ ಅಲವಿ ತಂಞಳ್ ಉಲ್ತೂರು ಉದ್ಘಾಟಿಸಿದರು.
SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಬಹು ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಉಸ್ತಾದರು ಅಧ್ಯಕ್ಷತೆ ವಹಿಸಿದ್ದರು. ಆಧ್ಯಾತ್ಮಿಕ ನೇತ್ರತ್ವ ಹಾಗೂ ದುಆ ಮಜ್ಲಿಸ್ ಬಹು ಅಸ್ಸಯ್ಯಿದ್ ಜಲಾಲುದ್ದೀನ್ ತಂಞಳ್ ಅಲ್ ಹಾದಿ ಮಲ್ಜಹ್ ನೇತೃತ್ವ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ
ಬಹು ತ್ವಾಹಿರ್ ಸಖಾಫಿ ಉಸ್ತಾದ್ ಮಂಜೇರೀ ಕೇರಳ ಇವರು “ಸ್ಮಾರ್ಟ್ ಲೀಡರ್ಸ್” ಎಂಬ ವಿಷಯದಲ್ಲಿ ತರಗತಿ ಮಂಡಿಸಿದರು. ಸಂಘಟನೆಯ ಜವಾಬ್ದಾರಿ ಎಂಬ ವಿಷಯದಲ್ಲಿ
SჄS ಈಸ್ಟ್ ಜಿಲ್ಲಾ ಅಧ್ಯಕ್ಷರು ಬಹು ಅಶ್ರಫ್ ಸಖಾಫಿ ಮಾಡಾವು ಸವಿಸ್ತಾರವಾಗಿ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಯುನಿಟ್ ,ಸರ್ಕಲ್ ಪದಾಧಿಕಾರಿಗಳು ಹಾಗೂ ಝೋನ್ ಕಾರ್ಯಕಾರಿ ಸಮಿತಿ ಸದಸ್ಯರೆಲ್ಲರೂ ಸರಿ ಸುಮಾರು 300 ಕ್ಕೂ ಅಧಿಕ ನಾಯಕರು ಭಾಗವಹಿಸದ್ದರು.
ಕಾರ್ಯಕ್ರಮದ ಪ್ರಾರಂಭಕ್ಕೆ ಬದ್ರ್ ಶುಅದಾಕಳ ಹೆಸರಲ್ಲಿ ಮೌಲೀದ್ ಪಾರಾಯಣ ನಡೆಯಿತು ಝೋನ್ ಕೋಶಾಧಿಕಾರಿ ಬಹು ರಝಾಕ್ ಸಖಾಫಿ ಮಡಂತ್ಯಾರು ನೇತೃತ್ವ ವಹಿಸಿದ್ದರು
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬದ್ರುದ್ದೀನ್ ಅಲ್ ಹಾದಿ ತಂಙಳ್ ಮದನಿ ಪೊಮ್ಮಾಜೆ, SჄS ರಾಜ್ಯ ಕಾರ್ಯದರ್ಶಿ ಬಹು ಹಂಝ ಮದನಿ ಉಸ್ತಾದ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಜಿಲ್ಲಾ ಕೋಶಾಧಿಕಾರಿ ಶಾಫಿ ಸಖಾಫಿ ಪಟ್ಟೂರು ಸುನ್ನೀ ಕೋ ಅರ್ಡಿನೇಶನ್ ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯಾಧ್ಯಕ್ಷರು ಉಮರ್ GK , ಸಿದ್ದೀಕ್ JH ವಕ್ಫ್ ಸಲಹಾ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆ SSF ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು,ಡಿವಿಷನ್ ಅಧ್ಯಕ್ಷರಾದ ಇಸ್ಹಾಖ್ ಅಳದಂಗಡಿ,ಪ್ರದಾನ ಕಾರ್ಯದರ್ಶಿ ನಾಸಿರ್ ಪದ್ದಂಡಡ್ಕ ಭಾಗವಹಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ SჄS ಬೆಳ್ತಂಗಡಿ ಝೋನ್ ಪ್ರದಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿ ಕೊನೆಯಲ್ಲಿ ಝೋನ್ ಸಂಘಟನಾ ಕಾರ್ಯದರ್ಶಿ ಜಮಾಲುದ್ದೀನ್ ಲತೀಫೀ ಲಾಡಿ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯ.



















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ