ಬೆಳ್ತಂಗಡಿ: ಜೂನ್ 15 SჄS ಬೆಳ್ತಂಗಡಿ ಝೋನ್ ಸಮಿತಿಯಿಂದ ಸ್ಮಾರ್ಟ್ ಲೀಡರ್ಸ್ ಕ್ಯಾಂಪ್ ನಿನ್ನೆ ಸಂಜೆ 6 ಗಂಟೆಗೆ ಸರಿಯಾಗಿ FM ಗಾರ್ಡನ್ ಗುರುವಾಯನಕೆರೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸುನ್ನೀ ಕೋ ಅರ್ಡಿನೇಶನ್ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದತ್ ಬಾ ಅಲವಿ ತಂಞಳ್ ಉಲ್ತೂರು ಉದ್ಘಾಟಿಸಿದರು.
SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಬಹು ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಉಸ್ತಾದರು ಅಧ್ಯಕ್ಷತೆ ವಹಿಸಿದ್ದರು. ಆಧ್ಯಾತ್ಮಿಕ ನೇತ್ರತ್ವ ಹಾಗೂ ದುಆ ಮಜ್ಲಿಸ್ ಬಹು ಅಸ್ಸಯ್ಯಿದ್ ಜಲಾಲುದ್ದೀನ್ ತಂಞಳ್ ಅಲ್ ಹಾದಿ ಮಲ್ಜಹ್ ನೇತೃತ್ವ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ
ಬಹು ತ್ವಾಹಿರ್ ಸಖಾಫಿ ಉಸ್ತಾದ್ ಮಂಜೇರೀ ಕೇರಳ ಇವರು “ಸ್ಮಾರ್ಟ್ ಲೀಡರ್ಸ್” ಎಂಬ ವಿಷಯದಲ್ಲಿ ತರಗತಿ ಮಂಡಿಸಿದರು. ಸಂಘಟನೆಯ ಜವಾಬ್ದಾರಿ ಎಂಬ ವಿಷಯದಲ್ಲಿ
SჄS ಈಸ್ಟ್ ಜಿಲ್ಲಾ ಅಧ್ಯಕ್ಷರು ಬಹು ಅಶ್ರಫ್ ಸಖಾಫಿ ಮಾಡಾವು ಸವಿಸ್ತಾರವಾಗಿ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಯುನಿಟ್ ,ಸರ್ಕಲ್ ಪದಾಧಿಕಾರಿಗಳು ಹಾಗೂ ಝೋನ್ ಕಾರ್ಯಕಾರಿ ಸಮಿತಿ ಸದಸ್ಯರೆಲ್ಲರೂ ಸರಿ ಸುಮಾರು 300 ಕ್ಕೂ ಅಧಿಕ ನಾಯಕರು ಭಾಗವಹಿಸದ್ದರು.
ಕಾರ್ಯಕ್ರಮದ ಪ್ರಾರಂಭಕ್ಕೆ ಬದ್ರ್ ಶುಅದಾಕಳ ಹೆಸರಲ್ಲಿ ಮೌಲೀದ್ ಪಾರಾಯಣ ನಡೆಯಿತು ಝೋನ್ ಕೋಶಾಧಿಕಾರಿ ಬಹು ರಝಾಕ್ ಸಖಾಫಿ ಮಡಂತ್ಯಾರು ನೇತೃತ್ವ ವಹಿಸಿದ್ದರು
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬದ್ರುದ್ದೀನ್ ಅಲ್ ಹಾದಿ ತಂಙಳ್ ಮದನಿ ಪೊಮ್ಮಾಜೆ, SჄS ರಾಜ್ಯ ಕಾರ್ಯದರ್ಶಿ ಬಹು ಹಂಝ ಮದನಿ ಉಸ್ತಾದ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಜಿಲ್ಲಾ ಕೋಶಾಧಿಕಾರಿ ಶಾಫಿ ಸಖಾಫಿ ಪಟ್ಟೂರು ಸುನ್ನೀ ಕೋ ಅರ್ಡಿನೇಶನ್ ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯಾಧ್ಯಕ್ಷರು ಉಮರ್ GK , ಸಿದ್ದೀಕ್ JH ವಕ್ಫ್ ಸಲಹಾ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆ SSF ರಾಜ್ಯ ಕಾರ್ಯದರ್ಶಿ ರಶೀದ್ ಮಡಂತ್ಯಾರು,ಡಿವಿಷನ್ ಅಧ್ಯಕ್ಷರಾದ ಇಸ್ಹಾಖ್ ಅಳದಂಗಡಿ,ಪ್ರದಾನ ಕಾರ್ಯದರ್ಶಿ ನಾಸಿರ್ ಪದ್ದಂಡಡ್ಕ ಭಾಗವಹಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ SჄS ಬೆಳ್ತಂಗಡಿ ಝೋನ್ ಪ್ರದಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿ ಕೊನೆಯಲ್ಲಿ ಝೋನ್ ಸಂಘಟನಾ ಕಾರ್ಯದರ್ಶಿ ಜಮಾಲುದ್ದೀನ್ ಲತೀಫೀ ಲಾಡಿ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯ.



















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ