ಟೆಹ್ರಾನ್: ಇರಾನ್ ಬೇಷರತ್ತಾಗಿ ಶರಣಾಗಬೇಕು ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಯನ್ನು ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮಾನೈ ತಿರಸ್ಕರಿಸಿದ್ದಾರೆ.
ಶತ್ರುಗಳಿಗೆ ತಲೆಬಾಗುವುದಿಲ್ಲ ಎಂಬುದಾಗಿದೆ ಇರಾನ್ನ ನಿಲುವು. ಶತ್ರುಗಳಿಗೆ ಶರಣಾಗುವ ಉದ್ದೇಶವಿಲ್ಲ ಎಂದು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈ ಹೇಳಿದ್ದಾರೆ.
ಟೆಹ್ರಾನ್ ನಗರವನ್ನು ಜನರು ಕೂಡಲೇ ತೊರೆಯಬೇಕು. ಯುದ್ಧಕ್ಕೆ ಅಂತ್ಯ ಹಾಡಬೇಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಯೊಡ್ಡಿದ ನಡುವೆಯೇ ಯುದ್ಧ ಆರಂಭವಾಗಿದೆ ಎಂದು ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮಾನೈ ಬುಧವಾರ (ಜೂನ್ 18) ತಿರುಗೇಟು ನೀಡಿರುವುದಾಗಿ ವರದಿಯಾಗಿದೆ.
“ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್, ಯಾವುದೇ ಕಾರಣಕ್ಕೂ ಭಯೋತ್ಪಾದಕ ಝಿಯೋನಿಸ್ಟ್ (ಯಹೂದಿ) ಆಡಳಿತಕ್ಕೆ ಯಾವ ಕರುಣೆಯನ್ನೂ ತೋರಿಸುವುದಿಲ್ಲ” ಎಂದು ಖಮನೈ ಮತ್ತೊಂದು ಪೋಸ್ಟ್ ನಲ್ಲಿ ಆಕ್ರೋಶ ಹೊರಹಾಕಿರುವುದಾಗಿ ವರದಿ ಹೇಳಿದೆ. ಭಯೋತ್ಪಾದಕ ಝಿಯೋನಿಸ್ಟ್ ಆಡಳಿತಕ್ಕೆ ನಾವು ಪ್ರಬಲ ತಿರುಗೇಟು ನೀಡುತ್ತೇವೆ. ಇದರಲ್ಲಿ ಯಾವುದೇ ಕರುಣೆಯ ಪ್ರಶ್ನೆಯೇ ಇಲ್ಲ ಎಂದು ಖಮನೈ ತನ್ನ ಆಕ್ರೋಶವನ್ನು ಹೊರಹಾಕಿದ್ದಾರೆ.
ಏತನ್ಮಧ್ಯೆ, ಇರಾನ್ ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಅಮೇರಿಕ ನೇರವಾಗಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಸೈನಿಕರನ್ನು ಕಳುಹಿಸಲಾಗುತ್ತಿದೆ ಮತ್ತು ಮಿಲಿಟರಿ ಸಿದ್ಧತೆಗಳನ್ನು ಬಲಪಡಿಸಲಾಗುತ್ತಿದೆ ಎಂಬ ವರದಿಗಳಿವೆ.
ಇಸ್ರೇಲ್ ಕಳೆದ ರಾತ್ರಿಯಿಡೀ ಟೆಹ್ರಾನ್ ಮೇಲೆ ದಾಳಿ ನಡೆಸಿತು. ಏತನ್ಮಧ್ಯೆ, ಇರಾನ್ ರಾತ್ರಿಯಿಡೀ ಇಸ್ರೇಲಿ ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿಯನ್ನು ಮುಂದುವರೆಸಿತು. ಹೈಫಾ ಮತ್ತು ಟೆಲ್ ಅವೀವ್ ಕಡೆಗೆ ಇರಾನ್ ಕಳುಹಿಸಿದ ಕ್ಷಿಪಣಿಗಳನ್ನು ಹೊಡೆದುರುಳಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ. ಇಸ್ರೇಲ್ನ ನೈಜ ಚಿತ್ರಣವನ್ನು ಹೊರ ಜಗತ್ತಿಗೆ ತೋರಿಸದಂತೆ, ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳನ್ನು ತಡೆ ಹಿಡಿಯಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ