ಟೆಹ್ರಾನ್: ಇರಾನ್ ಬೇಷರತ್ತಾಗಿ ಶರಣಾಗಬೇಕು ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಯನ್ನು ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮಾನೈ ತಿರಸ್ಕರಿಸಿದ್ದಾರೆ.
ಶತ್ರುಗಳಿಗೆ ತಲೆಬಾಗುವುದಿಲ್ಲ ಎಂಬುದಾಗಿದೆ ಇರಾನ್ನ ನಿಲುವು. ಶತ್ರುಗಳಿಗೆ ಶರಣಾಗುವ ಉದ್ದೇಶವಿಲ್ಲ ಎಂದು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮನೈ ಹೇಳಿದ್ದಾರೆ.
ಟೆಹ್ರಾನ್ ನಗರವನ್ನು ಜನರು ಕೂಡಲೇ ತೊರೆಯಬೇಕು. ಯುದ್ಧಕ್ಕೆ ಅಂತ್ಯ ಹಾಡಬೇಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆಯೊಡ್ಡಿದ ನಡುವೆಯೇ ಯುದ್ಧ ಆರಂಭವಾಗಿದೆ ಎಂದು ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮಾನೈ ಬುಧವಾರ (ಜೂನ್ 18) ತಿರುಗೇಟು ನೀಡಿರುವುದಾಗಿ ವರದಿಯಾಗಿದೆ.
“ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್, ಯಾವುದೇ ಕಾರಣಕ್ಕೂ ಭಯೋತ್ಪಾದಕ ಝಿಯೋನಿಸ್ಟ್ (ಯಹೂದಿ) ಆಡಳಿತಕ್ಕೆ ಯಾವ ಕರುಣೆಯನ್ನೂ ತೋರಿಸುವುದಿಲ್ಲ” ಎಂದು ಖಮನೈ ಮತ್ತೊಂದು ಪೋಸ್ಟ್ ನಲ್ಲಿ ಆಕ್ರೋಶ ಹೊರಹಾಕಿರುವುದಾಗಿ ವರದಿ ಹೇಳಿದೆ. ಭಯೋತ್ಪಾದಕ ಝಿಯೋನಿಸ್ಟ್ ಆಡಳಿತಕ್ಕೆ ನಾವು ಪ್ರಬಲ ತಿರುಗೇಟು ನೀಡುತ್ತೇವೆ. ಇದರಲ್ಲಿ ಯಾವುದೇ ಕರುಣೆಯ ಪ್ರಶ್ನೆಯೇ ಇಲ್ಲ ಎಂದು ಖಮನೈ ತನ್ನ ಆಕ್ರೋಶವನ್ನು ಹೊರಹಾಕಿದ್ದಾರೆ.
ಏತನ್ಮಧ್ಯೆ, ಇರಾನ್ ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಅಮೇರಿಕ ನೇರವಾಗಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಸೈನಿಕರನ್ನು ಕಳುಹಿಸಲಾಗುತ್ತಿದೆ ಮತ್ತು ಮಿಲಿಟರಿ ಸಿದ್ಧತೆಗಳನ್ನು ಬಲಪಡಿಸಲಾಗುತ್ತಿದೆ ಎಂಬ ವರದಿಗಳಿವೆ.
ಇಸ್ರೇಲ್ ಕಳೆದ ರಾತ್ರಿಯಿಡೀ ಟೆಹ್ರಾನ್ ಮೇಲೆ ದಾಳಿ ನಡೆಸಿತು. ಏತನ್ಮಧ್ಯೆ, ಇರಾನ್ ರಾತ್ರಿಯಿಡೀ ಇಸ್ರೇಲಿ ನಗರಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿಯನ್ನು ಮುಂದುವರೆಸಿತು. ಹೈಫಾ ಮತ್ತು ಟೆಲ್ ಅವೀವ್ ಕಡೆಗೆ ಇರಾನ್ ಕಳುಹಿಸಿದ ಕ್ಷಿಪಣಿಗಳನ್ನು ಹೊಡೆದುರುಳಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ. ಇಸ್ರೇಲ್ನ ನೈಜ ಚಿತ್ರಣವನ್ನು ಹೊರ ಜಗತ್ತಿಗೆ ತೋರಿಸದಂತೆ, ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳನ್ನು ತಡೆ ಹಿಡಿಯಲಾಗಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ