ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಕಾಸರಗೋಡು ಸಂಯುಕ್ತ ಜಮಾಅತ್ಗಳ ಸಭೆ ಹಾಗೂ “ಮೊಹಲ್ಲಾ ವ್ಯವಸ್ಥೆಯ ಮೂಲಕ ಸಮುದಾಯದ ಸಬಲೀಕರಣ” ಯೋಜನೆ ಪಂಪ್ವೆಲ್ ತಖ್ವಾ ಮಸೀದಿಯಲ್ಲಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮವು ಕೇರಳ SSF ಅಧ್ಯಕ್ಷ ಸಯ್ಯಿದ್ ಮುನೀರುಲ್ ಅಹ್ದಲ್ ರವರ ದುಆದೊಂದಿಗೆ ಆರಂಭಗೊಂಡಿತು. ಝೈನಿ ಕಾಮಿಲ್ ಸಖಾಫಿ ಸ್ವಾಗತ ಭಾಷಣ ಮಾಡಿದರೆ, ಡಾ. ಅಬ್ದುಲ್ ಹಕೀಮ್ ಅಝ್ಹರಿ ಉಸ್ತಾದರು ಸಭೆಯನ್ನು ಉದ್ಘಾಟಿಸಿ, ಹಿಂದಿನ ಕಾಲದ ಮಸೀದಿ ಮತ್ತು ಮಹಲ್ಲಾಗಳ ನೇತೃತ್ವದ ಮಾದರಿ ಹಾಗೂ ಸಮಾಜಕ್ಕೆ ನೀಡಿರುವ ಸೇವೆಯನ್ನು ಸ್ಮರಿಸಿಕೊಂಡರು.
GEMS (Grass root Empowerment through Mahallu System) ಗುರಿಯನ್ನು ಪ್ರಸ್ತಾಪಿಸಿ ಅಬ್ದು ಸರ್ ಮಾತನಾಡಿ, “ಈ ಮೊಹಲ್ಲಾಗಳಲ್ಲಿ ಬಯಸುವ ಬದಲಾವಣೆಗಳು ಹೇಗಿರಬೇಕು?” ಎಂಬುದರ ಬಗ್ಗೆ ಮನಮುಟ್ಟುವ ರೀತಿಯಲ್ಲಿ ವಿಷಯ ಮಂಡಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಖಾಝಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರು,
“ಖಾಝಿ ಎಂದರೆ ಕೇವಲ ಚಂದ್ರದರ್ಶನ ಅಥವಾ ನಿಕಾಹ್ ನಿರ್ವಹಿಸುವ ವ್ಯಕ್ತಿಯಲ್ಲ. ಸಮಾಜದ ಪ್ರತಿಯೊಂದು ವಿಷಯದಲ್ಲೂ ಖಾಝಿಗೆ ಜವಾಬ್ದಾರಿ ಇದೆ. ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಸಮಾಜವನ್ನು ಮುನ್ನಡೆಸುವಲ್ಲಿ ಖಾಝಿಗಳು ಪ್ರಮುಖ ಪಾತ್ರವಹಿಸಬೇಕು. ಅದಕ್ಕಾಗಿ ಖಾಝಿಗಳು ನಾಯಕತ್ವ ವಹಿಸುವ ಮೊಹಲ್ಲಾಗಳು ಮುಂದಾಗಬೇಕು,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಂಪ್ವೆಲ್ ತಖ್ವಾ ಮಸೀದಿಯ ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಸಂಯುಕ್ತ ಜಮಾಅತ್ಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ