ಕತಾರ್: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಕತಾರ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಖತರ್ ರಾಜಧಾನಿ ದೋಹಾದ ಆಗಸದಲ್ಲಿ ಅಗ್ನಿ ಜ್ವಾಲೆಗಳು ಕಾಣಿಸಿಕೊಂಡಿವೆ. ಅದು ವಾಯು ರಕ್ಷಣಾ ವ್ಯವಸ್ಥೆಯೋ ಅಥವಾ ಕ್ಷಿಪಣಿಗಳೋ ಎಂಬುದು ತಕ್ಷಣಕ್ಕೆ ತಿಳಿದಿಲ್ಲ ಎಂದು Aljazeera ವರದಿ ಮಾಡಿದೆ.
ಕತಾರ್ ನಾಗರಿಕರು ಮತ್ತು ನಿವಾಸಿಗಳ ಸುರಕ್ಷತೆಯೇ ಆದ್ಯತೆಯಾಗಿದ್ದು, ಅದಕ್ಕಾಗಿಯೇ ವಾಯುಪ್ರದೇಶವನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಈ ಕ್ರಮವು ಭದ್ರತಾ ಮುನ್ನೆಚ್ಚರಿಕೆಯ ಭಾಗವಾಗಿದೆ ಮತ್ತು ಆತಂಕದ ಅಗತ್ಯವಿಲ್ಲ ಎಂದು ಕತಾರ್ ವಿದೇಶಾಂಗ ಸಚಿವಾಲಯ ವಿವರಿಸಿದೆ. ಮುಚ್ಚುವಿಕೆಯು ಎಷ್ಟು ಕಾಲ ಇರುತ್ತದೆ ಎಂಬುದು ಪ್ರಸ್ತುತ ಸ್ಪಷ್ಟವಾಗಿಲ್ಲ. ಈ ಕ್ರಮವು ಭಾರತದಿಂದ ಬರುವ ವಿಮಾನಗಳ ಮೇಲೂ ಪರಿಣಾಮ ಬೀರುತ್ತದೆ.
ತನ್ನ ಪರಮಾಣು ತಾಣಗಳ ಮೇಲಿನ ದಾಳಿಯ ನಂತರ ಅಮೆರಿಕದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಈ ಹಿಂದೆ ಪದೇ ಪದೇ ಬೆದರಿಕೆ ಹಾಕಿದ್ದರಿಂದ ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗಿದೆ.
ಇದಕ್ಕೂ ಮೊದಲು, ಖತರ್ನಲ್ಲಿರುವ ಅಮೆರಿಕ ಮತ್ತು ಬ್ರಿಟನ್ ರಾಯಭಾರ ಕಚೇರಿಗಳು ಖತರ್ ನಲ್ಲಿರುವ ತಮ್ಮ ನಾಗರಿಕರು ಮುಂದಿನ ಸೂಚನೆ ಬರುವವರೆಗೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಶಿಫಾರಸು ಮಾಡುವ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದವು.
ಖತರ್ ನ ಹಲವಾರು ಶಾಲೆಗಳನ್ನೂ ನಾಳೆಯವರೆಗೆ ಮುಚ್ಚಲು ಆದೇಶಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ