ಅಬುಧಾಬಿ: ಇರಾನ್ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ದೋಹಾದಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದೆ. ಇದಕ್ಕೂ ಮುನ್ನ ಕತಾರ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಏತನ್ಮಧ್ಯೆ, ಯುಎಇ, ಸೌದಿ ಅರೇಬಿಯಾ, ಬಹರೈನ್, ಕುವೈತ್ ಸೇರಿದಂತೆ ಗಲ್ಫ್ ರಾಷ್ಟ್ರಗಳು ತಮ್ಮ ವಾಯು ಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಇದು ಭಾರತದಿಂದ ಸಹಿತವಿರುವ ವಿಮಾನಯಾನ ಸೇವೆಗಳಿಗೆ ಅಡಚಣೆಯಾಗಿದೆ. ಈ ಪ್ರದೇಶಗಳಿಗೆ ಮತ್ತು ಅಲ್ಲಿಂದ ಹಾರಾಟ ನಡೆಸುವ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಮಾನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಭಾರತದ ಮತ್ತು ಗಲ್ಫ್ ರಾಷ್ಟ್ರಗಳ ವಿವಿಧ ವಿಮಾನ ನಿಲ್ದಾಣಗಳಲ್ಲಿ ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದರಿಂದಾಗಿ ರಾಜ್ಯದ ಮಂಗಳೂರು ಮತ್ತು ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಮಂಗಳೂರಿನಿಂದ ದಮಾಮ್ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ಮಸ್ಕತ್ಗೆ ತಿರುಗಿಸಲಾಗಿದೆ. ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈನಲ್ಲಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ದಮಾಮ್ ಗೆ ಹೋಗುತ್ತಿದ್ದ ವಿಮಾನವನ್ನು ಮಸ್ಕತ್ ನಲ್ಲಿ ಇಳಿಸಲಾಗಿದ್ದು ಪ್ರಯಾಣಿಕರು ವಿಮಾನದಲ್ಲೇ ಉಳಿದಿದ್ದಾರೆ. ಅವರಿಗೆ ವಿಮಾನದಿಂದ ಇಳಿಯಲು ಅನುಮತಿ ಸಿಕ್ಕಿಲ್ಲ. ಅನುಮತಿ ಸಿಕ್ಕಿದರೆ ಅಲ್ಲಿ ಪ್ರಯಾಣಿಕರನ್ನು ಇಳಿಸಲಾಗುವುದು, ಇಲ್ಲದಿದ್ದರೆ ಇಂಧನ ತುಂಬಿಸಿ ವಿಮಾನ ಮಂಗಳೂರಿಗೆ ವಾಪಸ್ ಬರುವ ಸಾಧ್ಯತೆಯಿದೆ ಎಂದು ವಿಮಾನದಲ್ಲಿರುವ ಪ್ರಯಾಣಿಕರೊಬ್ಬರು ತಿಳಿಸಿದ್ದಾಗಿ ಮಾಹಿತಿ ಲಭಿಸಿದೆ.
ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮೊದಲು ತಮ್ಮ ವಿಮಾನಗಳ ಸ್ಥಿತಿಯ ಕುರಿತು ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಇರಾನ್ ಸಿದ್ಧತೆ ನಡೆಸುತ್ತಿದೆ ಮತ್ತು ಈ ಉದ್ದೇಶಕ್ಕಾಗಿ ಕ್ಷಿಪಣಿ ಉಡಾವಣಾ ಯಂತ್ರಗಳನ್ನು ಸಿದ್ಧಪಡಿಸುತ್ತಿದೆ ಎಂಬ ವರದಿಗಳು ಬಂದಿತ್ತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ