ಮಂಗಳೂರು – ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದ್ರಸ ಇದರ ವಿದ್ಯಾರ್ಥಿಗಳ ಅಧಿಕೃತ ಒಕ್ಕೂಟ ಸುನ್ನೀ ಬಾಲ ಸಂಘ (SBS) ಇದರ ನೂತನ ಸಮಿತಿಗೆ ಚುನಾವಣೆ ಪ್ರಕ್ರಿಯೆಯು “ಉತ್ತಮ ಸಮಾಜದ ಉದಾತ್ತ ಪ್ರಜೆಗಳಾಗೋಣ” ಎಂಬ ಸಂದೇಶದೊಂದಿಗೆ ನಡೆಯಿತು.
ಚುನಾವಣೆಗೆ ಮುನ್ನುಡಿಯಾಗಿ ಮದ್ರಸ ಪ್ರಾಂಶುಪಾಲರಾದ ಅಕ್ಬರ್ ಹಿಮಮಿ ಸಖಾಫಿ ಕುಪ್ಪೆಟ್ಟಿ ಇವರ ನೇತೃತ್ವದಲ್ಲಿ ಗ್ರ್ಯಾಂಡ್ ಅಸೆಂಬ್ಲಿ ನಡೆಸಿ ತದ ನಂತರ ಚುನಾವಣಾ ಅಧಿಕಾರಿ ಹಾಫಿಲ್ ಇಸ್ಮಾಯಿಲ್ ಹನೀಫಿ ಕಂಚಿಲ ಇವರ ನೇತೃತ್ವದಲ್ಲಿ ಸ್ಟಾಫ್ ಕೌನ್ಸಿಲ್ ನ ಸಂಪೂರ್ಣ ಸಹಕಾರದೊಂದಿಗೆ ಮದ್ರಸ ಉಸ್ತುವಾರಿಗಳ ಮೇಲ್ನೋಟದಲ್ಲಿ ಬದ್ರಿಯಾ ಜುಮಾ ಮಸೀದಿ ಬೊಳ್ಳಾಯಿ ಆಡಳಿತ ಸಮಿತಿಯ ಮಾರ್ಗದರ್ಶನದಲ್ಲಿ ಬಹಳ ಯಶಸ್ವಿಗಾಗಿ ಚುನಾವಣೆ ನಡೆಯಿತು.
ಮಾದ್ಯಮ,ಮೀಡಿಯಾ, ಮಿಲಿಟರಿ ಝಡ್ ,ಹೆಲ್ಪ್ ಡೆಸ್ಕ್ ,ವಿಶೇಷ ಮೆರುಗು ನೀಡಿತ್ತು .ಸದ್ರಿ ಚುನಾವಣೆಯು ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಸಂವಿಧಾನದ ಹಕ್ಕು ಚಲಾವಣೆಗೆ ಸ್ಫೂರ್ತಿಯಾಗಲಿದೆ ಮತ್ತು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ನಾಂದೀಯಾಗುವ ಮೂಲಕ ಉತ್ತಮ ಸಮಾಜದ ಉದಾತ್ತ ಪ್ರಜೆಗಳು ಆಗಲಿದ್ದಾರೆ ಎಂದು ಸ್ಥಳೀಯ ಖತೀಬರೂ,SJM ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯೂ ಆದ K.H.U ಶಾಫಿ ಮದನಿ ಅಲ್ ಅಝ್ಹರಿ ಚುನಾವಣೆಯ ಮುನ್ನ ನಡೆದ ಮುನ್ನುಡಿ ಭಾಷಣದಲ್ಲಿ ತಿಳಿಸಿದರು.18 ಅಭ್ಯರ್ಥಿಗಳು 4 ಕ್ಯಾಬಿನೆಟ್ ,149 ಮತದಾರರು ಮತ ಚಲಾಯಿಸುವ ಮೂಲಕ 596 ಮತ ಚಲಾವಣೆಯಾಗಿದ್ದು ಬುಧವಾರ ಸಂಜೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ಚುನಾವಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ