ಲಖನೌ: ತಾಜ್ಮಹಲ್ ಶಿವನ ದೇವಾಲಯ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆಗೆ ಅಜಂ ಖಾನ್ ಈ ರೀತಿ ಚುಚ್ಚು ಮಾತಿನ ಪ್ರತಿಕ್ರಿಯೆ ನೀಡಿರುವ ವಿಡಿಯೊ ಈಗ ವೈರಲ್ ಆಗಿದೆ.
‘ತಾಜ್ಮಹಲ್ ಮೂಲದಲ್ಲಿ ಶಿವನ ದೇವಾಲಯ. ಈ ಐತಿಹಾಸಿಕ ಕಟ್ಟಡವನ್ನು ಧ್ವಂಸಗೊಳಿಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವ ವಹಿಸಿಕೊಂಡರೆ ನಾನೂ ಕೈಜೋಡಿಸುತ್ತೇನೆ’ ಎಂದು ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಹೇಳಿದ್ದಾರೆ.
‘ತಾಜ್ಮಹಲ್ ಶಿವನ ದೇವಾಲಯ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದು, ಅದನ್ನು ಧ್ವಂಸಗೊಳಿಸಲು ನಾನು ಬೆಂಬಲ ನೀಡುತ್ತೇನೆ. ತಾಜ್ಮಹಲ್ ಕೆಡುವುವಲ್ಲಿ ಮೊದಲ ಹೊಡೆತ ಯೋಗಿ ಆದಿತ್ಯನಾಥ್ ಅವರದಾದರೆ, ಎರಡನೇ ಏಟು ನನ್ನದಾಗಿರುತ್ತದೆ. ಈ ಕಾರ್ಯಕ್ಕೆ ಹೆಗಲು ಕೊಡುವ ಸಂಬಂಧ ನಾನೂ ಬಿಜೆಪಿ ಸೇರುತ್ತೇನೆ. ಜೊತೆಗೆ 20 ಸಾವಿರಕ್ಕೂ ಅಧಿಕ ಜನರನ್ನು ಕರೆದುಕೊಂಡು ಬರುತ್ತೇನೆ’ ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.
‘ತಾಜ್ ಮಹಲ್ ಗುಲಾಮಗಿರಿಯ ದ್ಯೋತಕವೂ ಆಗಿದೆ’ ಎಂದು ಹೇಳುವ ಮೂಲಕ ಅಜಂ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ತಿವಿದಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ