*
ಉಡುಪಿಯ ನಿವಾಸಿ ಸಮೀರ್ ಮೊಹಮ್ಮದ್ ಖಾಸಿಂ ರವರು ದಿನಾಂಕ 19/06/2025 ರಂದು ಜಿದ್ದಾದಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ಬನಿಮಲಿಕ್ ನಲ್ಲಿರುವ ಖಬರ್ ಸ್ಥಾನದಲ್ಲಿ ಕೆಸಿಎಫ್ ಜಿದ್ದಾ ಝೋನಿನ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು
ಅಂತ್ಯಕ್ರಿಯೆಗೆ ಬೇಕಾದ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳು ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ಶರಫಿಯ್ಯ ಸೆಕ್ಟರಿನ ಸಾಂತ್ವನ ಇಲಾಖೆಯ ಕಾರ್ಯದರ್ಶಿ ಆರಿಫ್ ಉಚ್ಚಿಲ ರವರ ನೇತೃತ್ವದಲ್ಲಿ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಬಾಷಾ ಗಂಗಾವಳಿ , ಹಾಗೂ ಕಾರ್ಯದರ್ಶಿಯಾದ ಇಬ್ರಾಹಿಂ ಹಾಜಿ ಕಿನ್ಯ , ಸಹಿತ ಅನೇಕ ನಾಯಕರು ಸಹಕಾರದೊಂದಿಗೆ ನಡೆಯಿತು.
ಜಿದ್ದಾದ ಫೆಲೆಸ್ತೀನ್ನಲ್ಲಿರುವ ಜಾಮಿಯಾ ಮಸ್ಜಿದ್ ನಲ್ಲಿ 25-06-2025 ಫಜರ್ ನಮಾಜಿನ ಬಳಿಕ ಮಯ್ಯತ್ ನಮಾಝ್ ನಿರ್ವಹಿಸಿ ಬನಿಮಲಿಕ್ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.ಈ ಸಂದರ್ಭಲ್ಲಿ ಕೆಸಿಎಫ್ ಜಿದ್ದಾ ಝೋನಿನ ಅಧ್ಯಕ್ಷ ರಾದ ಸಯ್ಯಿದ್ ಅಬ್ದುಲ್ ರಹ್ಮಾನ್ ತಂಙಲ್ ಉಚ್ಚಿಲ, ಪ್ರ.ಕಾರ್ಯದರ್ಶಿಯಾದ ಮನ್ಸೂರ್ ಕಾಟಿಪಳ್ಳ ,ಯಹ್ಯಾ ಬಿಳಿಯೂರ್ , ಹಾಗೂ ಸಹಪಾಠಿ ಗಳಾದ ಸಾದಿಕ್ ಹೈದರಾಬಾದ್, ತಾರಿಕ್ ,ಹಾಗೂ ಇಜಾಝ್ ಬಟ್ಕಳ್ ಸೇರಿದಂತೆ ಹಲವು ನಾಯಕರು, ಸಹಕಾರ್ಯಕರ್ತರು, ಹಾಗೂ ಸ್ಥಳೀಯರು ದಫನ ಕಾರ್ಯದಲ್ಲಿ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್