*
ಉಡುಪಿಯ ನಿವಾಸಿ ಸಮೀರ್ ಮೊಹಮ್ಮದ್ ಖಾಸಿಂ ರವರು ದಿನಾಂಕ 19/06/2025 ರಂದು ಜಿದ್ದಾದಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ಬನಿಮಲಿಕ್ ನಲ್ಲಿರುವ ಖಬರ್ ಸ್ಥಾನದಲ್ಲಿ ಕೆಸಿಎಫ್ ಜಿದ್ದಾ ಝೋನಿನ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು
ಅಂತ್ಯಕ್ರಿಯೆಗೆ ಬೇಕಾದ ಹಲವಾರು ಕಾನೂನಾತ್ಮಕ ದಾಖಲೆ ಪತ್ರಗಳು ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ಶರಫಿಯ್ಯ ಸೆಕ್ಟರಿನ ಸಾಂತ್ವನ ಇಲಾಖೆಯ ಕಾರ್ಯದರ್ಶಿ ಆರಿಫ್ ಉಚ್ಚಿಲ ರವರ ನೇತೃತ್ವದಲ್ಲಿ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಬಾಷಾ ಗಂಗಾವಳಿ , ಹಾಗೂ ಕಾರ್ಯದರ್ಶಿಯಾದ ಇಬ್ರಾಹಿಂ ಹಾಜಿ ಕಿನ್ಯ , ಸಹಿತ ಅನೇಕ ನಾಯಕರು ಸಹಕಾರದೊಂದಿಗೆ ನಡೆಯಿತು.
ಜಿದ್ದಾದ ಫೆಲೆಸ್ತೀನ್ನಲ್ಲಿರುವ ಜಾಮಿಯಾ ಮಸ್ಜಿದ್ ನಲ್ಲಿ 25-06-2025 ಫಜರ್ ನಮಾಜಿನ ಬಳಿಕ ಮಯ್ಯತ್ ನಮಾಝ್ ನಿರ್ವಹಿಸಿ ಬನಿಮಲಿಕ್ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.ಈ ಸಂದರ್ಭಲ್ಲಿ ಕೆಸಿಎಫ್ ಜಿದ್ದಾ ಝೋನಿನ ಅಧ್ಯಕ್ಷ ರಾದ ಸಯ್ಯಿದ್ ಅಬ್ದುಲ್ ರಹ್ಮಾನ್ ತಂಙಲ್ ಉಚ್ಚಿಲ, ಪ್ರ.ಕಾರ್ಯದರ್ಶಿಯಾದ ಮನ್ಸೂರ್ ಕಾಟಿಪಳ್ಳ ,ಯಹ್ಯಾ ಬಿಳಿಯೂರ್ , ಹಾಗೂ ಸಹಪಾಠಿ ಗಳಾದ ಸಾದಿಕ್ ಹೈದರಾಬಾದ್, ತಾರಿಕ್ ,ಹಾಗೂ ಇಜಾಝ್ ಬಟ್ಕಳ್ ಸೇರಿದಂತೆ ಹಲವು ನಾಯಕರು, ಸಹಕಾರ್ಯಕರ್ತರು, ಹಾಗೂ ಸ್ಥಳೀಯರು ದಫನ ಕಾರ್ಯದಲ್ಲಿ ಸಹಕರಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ