ಕೊಡಗು: ಮುಸ್ಲಿಂ ಸಮುದಾಯದ ಉನ್ನತಿಗೆ ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕಿದೆ. ಈ ನಿಟ್ಟಿನಲ್ಲಿ ಸಮುದಾಯದ ಎಲ್ಲಾ ಸೇವನೆಗಳಿಗೆ ಕರ್ನಾಟಕ ಮುಸ್ಲಿಂ ಯೂನಿಟಿ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಜಿ ಏ ಬಾವಾರವರು ಹೇಳಿದರು.
ಅವರು ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಇದರ ಕೊಡಗು ಜಿಲ್ಲಾ ಘಟಕ ಉದ್ಘಾಟಿಸಿ ಮಾತನಾಡಿದರು.ಸಂಸ್ಥೆಯ ಮೂಲಕ ಹಲವು ಸೇವೆಗಳನ್ನು ನಾವು ಮಾಡಬೇಕು.
ರಾಜಕೀಯ ರಹಿತವಾಗಿ ಕಾನೂನಿನ ಚೌಕಟ್ಟಿನೊಳಗೆ ನಿಂತು ಸೇವೆ ಮುಂದುವರಿಸಿದರೆ ಅದು ಶಾಶ್ವತವಾಗಿ ಉಳಿದುಕೊಳ್ಳುತ್ತದೆ.
ಸರಕಾರದಿಂದ ಸಿಗುವ ಸವಲತ್ತುಗಳು, ಶಿಕ್ಷಣ ಮಾಹಿತಿ, ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ, ಸರಕಾರಿ ಉದ್ಯೋಗದ ಬಗ್ಗೆ ಅರಿವು ಮೂಡಿಸುವಿಕೆ, ಡ್ರಗ್ಸ್ ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವುದು ಹೀಗೆ ಹಲವಾರು ಯೋಜನೆಗಳೊಂದಿಗೆ ನಾವು ಮುನ್ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಧಾರ್ಮಿಕ ಬೋಧನೆಯೊಂದಿಗೆ ಉತ್ತಮ ಸೇವೆಗೆ ಮುನ್ನಡೆದಾಗ ಅಲ್ಲಾಹನ ಸಹಾಯ ಸಿಗುತ್ತದೆ ಜೊತೆಗೆ ಜನರು ನಮ್ಮನ್ನು ಸ್ವೀಕರಿಸುತ್ತಾರೆ.
ನಾವು ಪ್ರಚೋದನೆಗೆ ಒಳಗಾಗಬಾರದು, ಪ್ರಚೋದಿಸುವವರು ಯಾವತ್ತೂ ಸಮಾಜದ ಒಳಿತನ್ನು ಬಯಸುವುದಿಲ್ಲ ಆದುದರಿಂದ ತಾಳ್ಮೆಯಿಂದ ಆಲೋಚಿಸಿ ಕಾರ್ಯಕ್ಕಿಳಿಯಬೇಕೆಂದು ಹೇಳಿದರು.
ನಾವೆಲ್ಲರೂ ಒಗ್ಗಟ್ಟಾಗಿ ಸಮುದಾಯ ಉನ್ನತಿಗೆ ಶ್ರಮಿಸೋಣ, ಪರಂಪರೆಯ ಸೌಹಾರ್ದತೆಯನ್ನು ಬೆಳೆಸೋಣ ಎಂದು ನಿವೃತ್ತ ಡಿಸಿಪಿ ಜಿ ಏ ಬಾವಾ ರವರು ಹೇಳಿದರು.

















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ