ಕೊಡಗು: ಮುಸ್ಲಿಂ ಸಮುದಾಯದ ಉನ್ನತಿಗೆ ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕಿದೆ. ಈ ನಿಟ್ಟಿನಲ್ಲಿ ಸಮುದಾಯದ ಎಲ್ಲಾ ಸೇವನೆಗಳಿಗೆ ಕರ್ನಾಟಕ ಮುಸ್ಲಿಂ ಯೂನಿಟಿ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಜಿ ಏ ಬಾವಾರವರು ಹೇಳಿದರು.
ಅವರು ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಇದರ ಕೊಡಗು ಜಿಲ್ಲಾ ಘಟಕ ಉದ್ಘಾಟಿಸಿ ಮಾತನಾಡಿದರು.ಸಂಸ್ಥೆಯ ಮೂಲಕ ಹಲವು ಸೇವೆಗಳನ್ನು ನಾವು ಮಾಡಬೇಕು.
ರಾಜಕೀಯ ರಹಿತವಾಗಿ ಕಾನೂನಿನ ಚೌಕಟ್ಟಿನೊಳಗೆ ನಿಂತು ಸೇವೆ ಮುಂದುವರಿಸಿದರೆ ಅದು ಶಾಶ್ವತವಾಗಿ ಉಳಿದುಕೊಳ್ಳುತ್ತದೆ.
ಸರಕಾರದಿಂದ ಸಿಗುವ ಸವಲತ್ತುಗಳು, ಶಿಕ್ಷಣ ಮಾಹಿತಿ, ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ, ಸರಕಾರಿ ಉದ್ಯೋಗದ ಬಗ್ಗೆ ಅರಿವು ಮೂಡಿಸುವಿಕೆ, ಡ್ರಗ್ಸ್ ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವುದು ಹೀಗೆ ಹಲವಾರು ಯೋಜನೆಗಳೊಂದಿಗೆ ನಾವು ಮುನ್ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಧಾರ್ಮಿಕ ಬೋಧನೆಯೊಂದಿಗೆ ಉತ್ತಮ ಸೇವೆಗೆ ಮುನ್ನಡೆದಾಗ ಅಲ್ಲಾಹನ ಸಹಾಯ ಸಿಗುತ್ತದೆ ಜೊತೆಗೆ ಜನರು ನಮ್ಮನ್ನು ಸ್ವೀಕರಿಸುತ್ತಾರೆ.
ನಾವು ಪ್ರಚೋದನೆಗೆ ಒಳಗಾಗಬಾರದು, ಪ್ರಚೋದಿಸುವವರು ಯಾವತ್ತೂ ಸಮಾಜದ ಒಳಿತನ್ನು ಬಯಸುವುದಿಲ್ಲ ಆದುದರಿಂದ ತಾಳ್ಮೆಯಿಂದ ಆಲೋಚಿಸಿ ಕಾರ್ಯಕ್ಕಿಳಿಯಬೇಕೆಂದು ಹೇಳಿದರು.
ನಾವೆಲ್ಲರೂ ಒಗ್ಗಟ್ಟಾಗಿ ಸಮುದಾಯ ಉನ್ನತಿಗೆ ಶ್ರಮಿಸೋಣ, ಪರಂಪರೆಯ ಸೌಹಾರ್ದತೆಯನ್ನು ಬೆಳೆಸೋಣ ಎಂದು ನಿವೃತ್ತ ಡಿಸಿಪಿ ಜಿ ಏ ಬಾವಾ ರವರು ಹೇಳಿದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ