ಕೊಡಗು: ಮುಸ್ಲಿಂ ಸಮುದಾಯದ ಉನ್ನತಿಗೆ ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕಿದೆ. ಈ ನಿಟ್ಟಿನಲ್ಲಿ ಸಮುದಾಯದ ಎಲ್ಲಾ ಸೇವನೆಗಳಿಗೆ ಕರ್ನಾಟಕ ಮುಸ್ಲಿಂ ಯೂನಿಟಿ ಸಂಸ್ಥೆ ಮುಂಚೂಣಿಯಲ್ಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಜಿ ಏ ಬಾವಾರವರು ಹೇಳಿದರು.
ಅವರು ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಇದರ ಕೊಡಗು ಜಿಲ್ಲಾ ಘಟಕ ಉದ್ಘಾಟಿಸಿ ಮಾತನಾಡಿದರು.ಸಂಸ್ಥೆಯ ಮೂಲಕ ಹಲವು ಸೇವೆಗಳನ್ನು ನಾವು ಮಾಡಬೇಕು.
ರಾಜಕೀಯ ರಹಿತವಾಗಿ ಕಾನೂನಿನ ಚೌಕಟ್ಟಿನೊಳಗೆ ನಿಂತು ಸೇವೆ ಮುಂದುವರಿಸಿದರೆ ಅದು ಶಾಶ್ವತವಾಗಿ ಉಳಿದುಕೊಳ್ಳುತ್ತದೆ.
ಸರಕಾರದಿಂದ ಸಿಗುವ ಸವಲತ್ತುಗಳು, ಶಿಕ್ಷಣ ಮಾಹಿತಿ, ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯ, ಸರಕಾರಿ ಉದ್ಯೋಗದ ಬಗ್ಗೆ ಅರಿವು ಮೂಡಿಸುವಿಕೆ, ಡ್ರಗ್ಸ್ ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವುದು ಹೀಗೆ ಹಲವಾರು ಯೋಜನೆಗಳೊಂದಿಗೆ ನಾವು ಮುನ್ನಡೆಯಬೇಕಿದೆ ಎಂದು ಸಲಹೆ ನೀಡಿದರು.
ಧಾರ್ಮಿಕ ಬೋಧನೆಯೊಂದಿಗೆ ಉತ್ತಮ ಸೇವೆಗೆ ಮುನ್ನಡೆದಾಗ ಅಲ್ಲಾಹನ ಸಹಾಯ ಸಿಗುತ್ತದೆ ಜೊತೆಗೆ ಜನರು ನಮ್ಮನ್ನು ಸ್ವೀಕರಿಸುತ್ತಾರೆ.
ನಾವು ಪ್ರಚೋದನೆಗೆ ಒಳಗಾಗಬಾರದು, ಪ್ರಚೋದಿಸುವವರು ಯಾವತ್ತೂ ಸಮಾಜದ ಒಳಿತನ್ನು ಬಯಸುವುದಿಲ್ಲ ಆದುದರಿಂದ ತಾಳ್ಮೆಯಿಂದ ಆಲೋಚಿಸಿ ಕಾರ್ಯಕ್ಕಿಳಿಯಬೇಕೆಂದು ಹೇಳಿದರು.
ನಾವೆಲ್ಲರೂ ಒಗ್ಗಟ್ಟಾಗಿ ಸಮುದಾಯ ಉನ್ನತಿಗೆ ಶ್ರಮಿಸೋಣ, ಪರಂಪರೆಯ ಸೌಹಾರ್ದತೆಯನ್ನು ಬೆಳೆಸೋಣ ಎಂದು ನಿವೃತ್ತ ಡಿಸಿಪಿ ಜಿ ಏ ಬಾವಾ ರವರು ಹೇಳಿದರು.

















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ