ಮಂಗಳೂರು: ಕೋಮು ವೈಷಮ್ಯಗಳು ಹೆಚ್ಚುತ್ತಿರುವ ಕರಾವಳಿ ಕರ್ನಾಟಕದಲ್ಲಿ ಸರ್ವಧರ್ಮೀಯರ ನಡುವೆ ಕೋಮು ಸೌಹಾರ್ದವನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘವು ಹಮ್ಮಿಕೊಂಡಿರುವ ‘ಕರಾವಳಿ ನೆಲದಲ್ಲಿ ಸೌಹಾರ್ದ ಸಂಚಾರ’ ಕಾರ್ಯಕ್ರಮದ ಸ್ವಾಗತ ಸಮಿತಿ ಕಚೇರಿಯನ್ನು ನಗರದ ಬಾವುಟಗುಡ್ಡೆ ಈದ್ಗಾ ಮಸೀದಿ ಸಮೀಪದ ಸೈನಿಕ ಭವನ ಕಟ್ಟಡದಲ್ಲಿ ಉದ್ಘಾಟಿಸಲಾಯಿತು.


ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷರುಗಳಾದ ಸಯ್ಯಿದ್ ಇಲ್ಯಾಸ್ ತಂಙಳ್ ಮಡಿಕೇರಿ, ಸಯ್ಯಿದ್ ಹಾಮೀಂ ತಂಙಳ್ ಬಾಳೆಹೊನ್ನೂರು, ಸಯ್ಯಿದ್ ಶಾಫೀ ನಈಮಿ ತಂಙಳ್ ಸಕಲೇಶಪುರ ಉದ್ಘಾಟಿಸಿದರು. ಜುಲೈ 14,15, 16 ರಂದು ಕುಂದಾಪುರದಿಂದ ಸುಳ್ಯದ ತನಕ ಸಾಗಲಿರುವ ಸೌಹಾರ್ದ ಸಂಚಾರದಲ್ಲಿ ಬಹುಧರ್ಮೀಯ ಬಂಧುಗಳು ಭಾಗವಹಿಸಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 17 ಪ್ರಮುಖ ಪಟ್ಟಣಗಳಲ್ಲಿ ಸೌಹಾರ್ದದ ಸಂದೇಶ ಸಾರಲಿದೆ.
ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದರು. ರಾಜ್ಯ ನಾಯಕರಾದ ಹಸೈನಾರ್ ಆನೆಮಹಲ್, ಮುಹಮ್ಮದ್ ಅಲೀ ಸಖಾಫಿ ಅಶ್ಅರಿಯ್ಯ, ಅಬ್ದುಲ್ ರಹ್ಮಾನ್ ರಝ್ವಿ, ಖಲೀಲ್ ಮಾಲಿಕಿ, ನ್ಯಾಯವಾದಿ ಇಲ್ಯಾಸ್ ನಾವುಂದ,ಇಬ್ರಾಹಿಂ ಮೂಡಿಗೆರೆ, ಅಶ್ರಫ್ ಎಮ್ಮೆಮಾಡು, ಮುಸ್ತಫಾ ಕೋಡಪದವು, ಜಿಲ್ಲಾ ನಾಯಕರಾದ ಮಹ್ಬೂಬ್ ಸಖಾಫಿ, ಅಶ್ರಫ್ ಸಖಾಫಿ ಮೂಡಡ್ಕ, ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಸಾಲಿಹ್ ಮುರ, ಶಾಫಿ ಸಖಾಫಿ ಕೊಕ್ಕಡ, ಯಾಕೂಬ್ ಸಅದಿ ನಾವೂರು, ನವಾಝ್ ಸಖಾಫಿ ಅಡ್ಯಾರ್, ಹಸನ್ ಪಾಂಡೇಶ್ವರ, ನಝೀರ್ ವಳವೂರು, ಝೀನತ್ ಭಕ್ಷ್ ಯತೀಂ ಖಾನಾ ಕಾರ್ಯದರ್ಶಿ ರಶೀದ್ ಹಾಜಿ ಪಾಂಡೇಶ್ವರ, ಸಮಾಜ ಸೇವಕರಾದ ಅಶ್ರಫ್ ಕಿನಾರ, ಫಾರೂಕ್ ಜೆಪ್ಪು, ಬಶೀರ್ ಬಜ್ಪೆ ಮತ್ತಿತರರು ಉಪಸ್ಥಿತರಿದ್ದರು.
ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಸ್ವಾಗತಿಸಿ, ಕೋಶಾಧಿಕಾರಿ ಮನ್ಸೂರ್ ಕೋಟೆಗದ್ದೆ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ