ಮಂಗಳೂರು : ದ. ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು, ಕೊಲೆಗಳು ಹಿಂಸಾತ್ಮಕ ಘಟನೆಗಳು ನಿಂತು ಶಾಂತಿ ಸೌಹಾರ್ದತೆ ನೆಲೆಗೊಂಡು ಗತ ವೈಭವವನ್ನು ಮರಳಿ ಪಡೆಯಬೇಕಾದರೆ ಹಿಂದು, ಮುಸ್ಲಿಂ ಕ್ರಿಸ್ತ ಹಾಗೂ ಇತರ ಧರ್ಮಗಳ ನಾಯಕರು ಹಾಗೂ ಜನ ಸಾಮಾನ್ಯರ ಹೃದಯಗಳು ಬೆಸೆದರೆ ಮಾತ್ರ ಸಾಧ್ಯ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ ಜಿ ಹನೀಫ್ ಹಾಜಿ ಉಳ್ಳಾಲ ಹೇಳಿದರು.
ಅವರು ಅಡ್ಯಾರ್ ಅಲ್ ಹಸನ್ ಅಕಾಡೆಮಿಯಲ್ಲಿ ನಡೆದ ಎಸ್ ವೈ ಎಸ್ ರಾಜ್ಯ ಸಮಿತಿಯು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಘೋಷಣೆಯೊಂದಿಗೆ ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ನಡೆಸುವ ಸೌಹಾರ್ದ ಸಂಚಾರದ ಮಂಗಳೂರು ಹಾಗೂ ಪರಂಗಿಪೇಟೆ ಜಂಟಿ ಸ್ವಾಗತ ಸಮಿತಿ ರಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.


ಸೌಹಾರ್ದ ಸಂಚಾರ ಮಾನೇಜಿಂಗ್ ಸಮಿತಿಯ ದ. ಕ ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಅಧ್ಯಕ್ಷತೆ ವಹಿಸಿದ್ದರು. ಅಲ್ ಹಸನ್ ಅಕಾಡೆಮಿ ಅಡ್ಯಾರ್ ಸಂಸ್ಥೆಯ ಅಧ್ಯಕ್ಷ ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಸಿದ್ದೀಕ್ ಮೋಂಟುಗೋಳಿ ಸೌಹಾರ್ದ ಸಂಚಾರ ದ ಮಾಹಿತಿ ನೀಡಿದರು.ಎಸ್ ವೈ ಎಸ್ ರಾಜ್ಯ ಕೋಶಾಧಿಕಾರಿ ಮನ್ಸೂರ್ ಅಲಿ ಕೋಟಗದ್ದೆ, ಎಸ್,ವೈ ಎಸ್ ಜಿಲ್ಲಾ ಅಧ್ಯಕ್ಷ ಮೆಹಬೂಬ್ ಸಖಾಫಿ ಕಿನ್ಯ, ರಾಜ್ಯ ಕಾರ್ಯದರ್ಶಿ ಹಸೈನಾರ್ ಆನೆಮಹಲ್, ಮುಸ್ಲಿಂ ಜಮಾಅತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಂ ಸಅದಿ ಗಾಣೆಮಾರ್, ಎಸ್ ವೈ ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಎಸ್ ವೈ ಎಸ್ ದಕ ಜಿಲ್ಲಾ ನಿಕಟ ಪೂರ್ವ ಅಧ್ಯಕ್ಷ ಇಸ್ ಹಾಕ್ ಝುಹ್ರಿ ಕಾನಕೆರೆ ಮಾತನಾಡಿದರು.
ಅಲ್ ಹಸನ್ ಅಕಾಡೆಮಿಯ ಕೋಶಾಧಿಕಾರಿ
ಹುಸೈನ್ ಹಾಜಿ ಕುವೈಟ್ , ಮುಸ್ಲಿಂ ಜಮಾಅತ್ ಮಂಗಳೂರು ಝೋನ್ ಅಧ್ಯಕ್ಷ ವಿ ಎ ಮುಹಮ್ಮದ್ ಸಖಾಫಿ ವಳವೂರು, ಬದ್ರುದ್ದೀನ್ ಅಝ್ಹರಿ ಕೈಕಂಬ, ನಝೀರ್ ಹಾಜಿ ಲುಲು, ಹಸನ್ ಪಾಂಡೇಶ್ವರ, ಬಶೀರ್ ಸಖಾಫಿ ಉಳ್ಳಾಲ, ಹಕೀಮ್ ಪೂಮಣ್ಣು, ಇಬ್ರಾಹಿಂ ಅಹ್ಸನಿ ಮಂಜನಾಡಿ, ಉಸ್ಮಾನ್ ಝುಹ್ರಿ ಕಿನ್ಯ, ಸಿದ್ದೀಕ್ ಸಿಸಿ, ಉಸ್ಮಾನ್ ಫಜೀರು, ಸಹಿತ ಹಲವಾರು ನಾಯಕರು ಉಪಸ್ಥಿತರಿದ್ದರು. ಇದೇ ಸಮಯದಲ್ಲಿ ಮಂಗಳೂರು, ಹಾಗೂ ಫರಂಗಿಪೇಟೆ ಕೇಂದ್ರ ಗಳ ಸ್ವಾಗತ ಸಮಿತಿ ರಚಿಸಲಾಯಿತು.
ಜಿಲ್ಲಾ ಕನ್ವೀನರ್ ನವಾಝ್ ಸಖಾಫಿ ಅಡ್ಯಾರ್ ಪದವು ಸ್ವಾಗತಿಸಿದರು. ಜಿಲ್ಲಾ ಕೋಆರ್ಡಿನೇಟರ್ ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮ ನಿರೂಪಿಸಿದರು. ಕೋಆರ್ಡಿನೇಟರ್ ಅಶ್ರಫ್ ಕಿನಾರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ