ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಸ್ವರೂಪ ಟಿ ಕೆ ಇವರನ್ನು ಉಡುಪಿ ಜಿಲ್ಲೆಯ ಪ್ರಮುಖ ಹತ್ತು ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ ಓಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ ಭೇಟಿಯಾಗಿ ಹೂವು ಗುಚ್ಛ ನೀಡುವ ಮೂಲಕ ಶುಭ ಹಾರೈಸಿತು.
ಚುನಾವಣೆಯ ಮೊದಲು ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೀಡಿದ ಆಶ್ವಾಸನೆಗಳನ್ನು ಪೂರ್ತಿಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಜ್ಞಾಪಕ ಪತ್ರ ನೀಡಲಾಯಿತು.
ಮುಖ್ಯವಾಗಿ, 2ಬಿ ಮೀಸಲಾತಿ ಮರು ಸ್ಥಾಪಿಸಬೇಕು, ಶಿಕ್ಷಣ ಕೇಂದ್ರಗಳಲ್ಲಿ ಹಿಜಾಬ್ ನಿಷೇಧವನ್ನು ತೆರವುಗೊಳಿಸಬೇಕು, ಉಡುಪಿ ಜಿಲ್ಲೆಯಲ್ಲಿ ಬೇರು ಬಿಡುತ್ತಿರುವ ಕೋಮುವಾದವನ್ನು, ಕೋಮು ಸಂಘರ್ಷಗಳನ್ನು ಹಾಗೂ ಕೋಮುವಾದಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡುವ ಹೇಳಿಕೆಗಳನ್ನು ನೀಡುವವರಿಗೆ ಜಾಮೀನು ರಹಿತ ಕಾಯ್ದೆಗಳ ಮೂಲಕ ಸೂಕ್ತ ಶಿಕ್ಷೆಯನ್ನು ನೀಡಬೇಕು, ಜೈಲಿನಲ್ಲಿರುವ ಅಮಾಯಕ ಯುವಕರನ್ನು ಬಿಡುಗಡೆಗೊಳಿಸಬೇಕು ಇಂತಹ ಹಲವು ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಜ್ಞಾಪಕ ಪತ್ರ ಸಲ್ಲಿಸಿ ಶೀಘ್ರ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಒತ್ತಾಯಿಸಲಾಯಿತು.
ನಿಯೋಗದಲ್ಲಿ ಜಿಲ್ಲಾ ಸುನ್ನೀ ಕೋ-ಓಡಿನೇಶನ್ ಸಮಿತಿಯ ಅಧ್ಯಕ್ಷರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ, ಕೋಶಾಧಿಕಾರಿ ವಸೀಮ್ ಭಾಷಾ ಕುಂದಾಪುರ, ಕಾರ್ಯದರ್ಶಿಗಳಾದ YM ಇಲಿಯಾಸ್ ಕಟಪಾಡಿ ಕಾನೂನು ಸಲಹೆಗಾರ ಅಡ್ವೋಕೇಟ್ ಹಬೀಬ್ ಸಂತೋಷ್ ನಗರ ನಿರ್ದೇಶಕರಾದ ಸೈಯ್ಯದ್ ಫರೀದ್ ಸಾಹೇಬ್ ಉಡುಪಿ U.J ಹನೀಫ್ ಅಂಬಾಗಿಲು ಹಾಗೂ ಸಂಘಟನೆಯ ಇತರ ನಾಯಕರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ