ಪುತ್ತೂರು : ಕರಾವಳಿ ಕರ್ನಾಟಕದಲ್ಲಿ ಕೋಮು ವೈಷಮ್ಯವು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೌಹಾರ್ದ ಸಂದೇಶಗಳನ್ನು ಹರಡುವ ಸಲುವಾಗಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕರಾವಳಿಯ ನೆಲದಲ್ಲಿ ‘ಸೌಹಾರ್ದ ಸಂಚಾರ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇದೇ ಬರುವ 2025 ಜುಲೈ 14, 15, 16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ಸರ್ವ ಮತೀಯರೂ ಜೊತೆಗೂಡಿ ಸಾಗುವ ಈ ಸಂಚಾರವು ಇಸ್ಲಾಮಿನ ಸೌಹಾರ್ದ ಸಂದೇಶವನ್ನು ಸಮಾಜದ ಮುಂದೆ ತೆರೆದಿಡಲಿದೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು, ಪಡುಬಿದ್ರಿ, ಮುಲ್ಕಿ, ಸುರತ್ಕಲ್, ಮಂಗಳೂರು, ಫರಂಗಿಪೇಟೆ, ಬಿ.ಸಿ.ರೋಡು, ಕಲ್ಲಡ್ಕ ಕೇಂದ್ರವಾಗಿ ಹಾದು ಜುಲೈ 16 ರಂದು ಬೆಳಿಗ್ಗೆ 9 ಕ್ಕೆ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಪುತ್ತೂರು ಕೇಂದ್ರಕ್ಕೆ ಆಗಮಿಸಿ ಉಪ್ಪಿನಂಗಡಿ, ಕಡಬ ಮಾರ್ಗವಾಗಿ ಸುಳ್ಯ ಕೇಂದ್ರದಲ್ಲಿ ಸಮಾರೋಪಗೊಳ್ಳಲಿದೆ. ಪ್ರತೀ ಕೇಂದ್ರಗಳಲ್ಲೂ ಕಾಲ್ನಡಿಗೆ ಜಾಥಾ ಮತ್ತು ಸಭಾ ಕಾರ್ಯಕ್ರಮಗಳು ನಡೆಯಲಿವೆ.
ಆದುದರಿಂದ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ತಮಗೆ ಸಾಧ್ಯವಾಗುವ ಕೇಂದ್ರಗಳಿಗೆ ಆಗಮಿಸಿ ಸೌಹಾರ್ದ ಸಂಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ವರದಿ : ಅಬೂಸೈಹಾನ್ ಪುತ್ತೂರು
















ಇನ್ನಷ್ಟು ಸುದ್ದಿಗಳು
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಇಸ್ಲಾಂಪುರ ಹೆಸರನ್ನು ಶ್ರೀರಾಮಪುರ ಎಂದು ಬದಲಿಸಬೇಕು- ಬಿಜೆಪಿ ಶಾಸಕರ ಬೇಡಿಕೆಗೆ ಗ್ರಾಮಸ್ಥರ ವಿರೋಧ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ
ಡೆಲಿವರಿ ಡ್ರೈವರ್ಗಳಿಗೆ ಹವಾನಿಯಂತ್ರಿತ ವಿಶ್ರಾಂತಿ ಕೇಂದ್ರಗಳು – ದುಬೈ ಆರ್ಟಿಎ ಕೊಡುಗೆ