ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು.ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ) ಚಂದ್ರನ್ ಕೂಟೇಲ್ ಮೊದಲಾದವರು ಇದ್ದರು.
ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು. ಇದು ಸಾಕಾಗುವುದಿಲ್ಲ ಎಂದು ರೋಗಿಗಳು ಮನವಿ ಮಾಡಿಕೊಂಡರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆಯವರು ಕೂಡಾ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರಿಗೆ ಮನವಿ ಮಾಡಿ ಬೆಳಗ್ಗಿನ ಆಹಾರವಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದನೆ ನೀಡಿದ ಆರೋಗ್ಯ ಸಚಿವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದರು. ಅದರಂತೆ ಜು.11ರ ಬೆಳಗ್ಗಿನಿಂದ ಒಳ ರೋಗಿಗಳಿಗೆ ಇಡ್ಲಿ, ಸಾಂಬಾರ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ವಕ್ಫ್ ಅಧ್ಯಕ್ಷರಾದ ಶಾಫಿ ಸಅದಿ ಭೇಟಿ
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರತಿಭೋತ್ಸವ 2K21- ಮೊಗರ್ಪಣೆ ಶಾಖೆ ಚಾಂಪಿಯನ್
ಸುಳ್ಯ: ಪ್ರವಾದಿ ನಿಂದನೆಗೈದವನ ಬಂಧನಕ್ಕೆ ಎಸ್ಡಿಪಿಐ ಒತ್ತಾಯ