ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲ ಜಾತಿ ಮತಗಳ ಜನರನ್ನು ಸೇರಿಸಿ ನಡೆಸುವ ‘ಸೌಹಾರ್ದ ಸಂಚಾರ’ಕ್ಕೆ ಜುಲೈ 14 ಸೋಮವಾರದಂದು ಬೆಳಗ್ಗೆ 9ಗಂಟೆಗೆ ಕುಂದಾಪುರದಲ್ಲಿ ಚಾಲನೆ ನೀಡಲಾಗುವುದು
ಸಯ್ಯಿದ್ ಕೋಟೇಶ್ವರ ತಂಙಳ್ ಝಿಯಾರತ್ ಮೂಲಕ ಚಾಲನೆ ನೀಡಲಿದ್ದು, ಧರ್ಮಗುರು
ರೆ.ಫಾ. ನೋವೆಲ್ ಬ್ರಹ್ಮಾವರ್, ಪತ್ರಕರ್ತ ಶಶಿಧರ ಹೆಮ್ಮಾಡಿ ಭಾಗವಹಿಸುವರು. ಶಾಸ್ತ್ರೀ ಪಾರ್ಕ್ನಲ್ಲಿ ನಡೆಯುವ ಸಾರ್ವಜನಿಕ ಸಭೆಯನ್ನು ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಉದ್ಘಾಟಿಸುವರು. ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸುವರು.
ಮಧ್ಯಾಹ್ನ 12 ಗಂಟೆಗೆ ಉಡುಪಿ ನಗರದಲ್ಲಿ ನಡೆಯುವ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್, ಬೈಂದೂರು ಹಲಗೇರಿ ಜೋಗಿ ಮನೆಯ ಶ್ರೀ ವಸಂತನಾಥ ಗುರೂಜಿ, ನ್ಯಾಯವಾದಿ ಹಂಝತ್ ಹೆಜಮಾಡಿ ಮಾತನಾಡುವರು.
ಅಪರಾಹ್ನ 3.30ಕ್ಕೆ ಕಾರ್ಕಳ ತಲುಪಲಿರುವ ಸೌಹಾರ್ದ ಸಂಚಾರದಲ್ಲಿ ಧರ್ಮಗುರುಗಳಾದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಚಾರ್ಯ ಮಹಾಸ್ವಾಮಿ, ಡಾ ಝೈನಿ ಕಾಮಿಲ್, ರೆ. ಫಾ. ಅಲ್ಬಾನ್ ಡಿ’ಸೋಜಾ ಅತ್ತೂರು ಚರ್ಚ್, ಎಸ್ ವೈ ಎಸ್ ರಾಜ್ಯ ಕೋಶಾಧಿಕಾರಿ ಮನ್ಸೂರ್ ಕೋಟೆಗದ್ದೆ ಸೌಹಾರ್ದ ಸಂದೇಶ ನೀಡುವರು.
ಸಂಜೆ 5.30ಕ್ಕೆ ಕಾಪುವಿನಲ್ಲಿ ಶ್ರೀ ಶ್ರೀ ಗುರೂಜಿ ಶಂಕರಪುರ ಮಠ, ರೆ.ಫಾ. ಸುಧೀರ್ ಪ್ರಕಾಶ್, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ರಝ್ವಿ, ಜಿಲ್ಲಾ ಉಪಾಧ್ಯಕ್ಷ ಯಾಕೂಬ್ ಸಅದಿ ನಾವೂರು ಮಾತನಾಡುವರು.
ರಾತ್ರಿ 8ಕ್ಕೆ ಪಡುಬಿದ್ರೆಯಲ್ಲಿ ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ, ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ರಖೀಬ್ ಕನ್ನಂಗಾರ್ ಸೌಹಾರ್ದ ಸಂದೇಶ ನೀಡಲಿದ್ದಾರೆ ಎಂದು ಸಂಚಾರ ಸಮಿತಿ ಕಾರ್ಯದರ್ಶಿ ಹಸೈನಾರ್ ಆನೆಮಹಲ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ