ಮಂಗಳೂರು : ಎಸ್.ವೈ.ಎಸ್ ರಾಜ್ಯ ಸಮಿತಿಯು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಘೋಷಣೆಯೊಂದಿಗೆ ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ನಡೆಯುವ ಸೌಹಾರ್ದ ಸಂಚಾರವು ದ.ಕ ವೆಸ್ಟ್ ಜಿಲ್ಲೆಯಲ್ಲಿ ಜುಲೈ 15 ಮಂಗಳವಾರ ನಡೆಯಲಿದೆ.
ಬೆಳಿಗ್ಗೆ 7:30 ಕ್ಕೆ ಕನ್ನಂಗಾರ್ ದರ್ಗಾ ಝಿಯಾರತ್ ನೊಂದಿಗೆ ಆರಂಭವಾಗುವ ಎರಡನೇ ದಿನದ ಸೌಹಾರ್ದ ಸಂಚಾರವು ಬೆಳಿಗ್ಗೆ 8:00 ಗಂಟೆಗೆ ಬಪ್ಪನಾಡುನಿಂದ ಸೌಹಾರ್ದ ಕಾಲ್ನಡಿಗೆ ಜಾಥಾವು ಮುಲ್ಲಿ ತನಕ ಬಂದು,ಮುಲ್ಕಿಯಲ್ಲಿ ಸಂದೇಶ ಭಾಷಣ ನಡೆಯಲಿದೆ.
ಬೆಳಿಗ್ಗೆ 9:00 ಗಂಟೆಗೆ ಗೋವಿಂದದಾಸ್ ಕಾಲೇಜು ಕಡೆಯಿಂದ ಸುರತ್ಕಲ್ ಜಂಕ್ಷನ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು,ಸುರತ್ಕಲ್ ಜಂಕ್ಷನ್ ನಲ್ಲಿ ಸಂದೇಶ ಭಾಷಣ ನಡೆಯಲಿದೆ.
ಬೆಳಿಗ್ಗೆ 11:00 ಗಂಟೆಗೆ ಬಾವುಟಗುಡ್ಡೆಯಿಂದ ಕ್ಲಾಕ್ ಟವರ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು, ಕ್ಲಾಕ್ ಟವರ್ ನಲ್ಲಿ ಸಂದೇಶ ಭಾಷಣ ನಡೆಯಲಿದೆ.
ಮದ್ಯಾಹ್ನ 2:00 ಗಂಟೆಗೆ ಅರ್ಕುಳದಿಂದ ಪರಂಗಿಪೇಟೆ ತನಕ ಸೌಹಾರ್ದ ಸಂಚಾರ ಜಾಥಾವು ಬಂದು, ಪರಂಗಿಪೇಟೆ ಜಂಕ್ಷನ್ ನಲ್ಲಿ ಸಂದೇಶ ಬಾಷಣ ನಡೆಯಲಿದೆ.
ಸಂಜೆ 4:00 ಗಂಟೆಗೆ ಕೈಕಂಬದಿಂದ ಬಿಸಿರೋಡ್ ತಾಲೂಕು ಕಛೇರಿ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು, ತಾಲೂಕು ಕಛೇರಿ ಮುಂಭಾಗದಲ್ಲಿ ಸಂದೇಶ ಭಾಷಣ ನಡೆಯಲಿದೆ.
ಸಂಜೆ 5:00 ಗಂಟೆಗೆ ಕಲ್ಲಡ್ಕ ಕೆಸಿರೋಡ್ ನಿಂದ ಕಲ್ಲಡ್ಕ ಜಂಕ್ಷನ್ ತನಕ ಸೌಹಾರ್ದ ಕಾಲ್ನಡಿಗೆ ಜಾಥಾವು ಬಂದು ಕಲ್ಲಡ್ಕ ಜಂಕ್ಷನ್ ನಲ್ಲಿ ಸಂದೇಶ ಭಾಷಣ ನಡೆಯಲಿದೆ.
ಈ ಸೌಹಾರ್ದ ಸಂಚಾರದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು,ಕ್ರೈಸ್ತ ಧರ್ಮ ಗುರುಗಳು,ಮುಸ್ಲಿಂ ಧಾರ್ಮಿಕ ನಾಯಕರು,ಹಿಂದು,ಮುಸ್ಲಿಂ,ಕ್ರೈಸ್ತ ಬಾಂಧವರು,ಸಾಮಾಜಿಕ,ಶೈಕ್ಷಣಿಕ ನಾಯಕರು,ಸೌಹಾರ್ದತೆಯ ಸಂದೇಶವನ್ನು ಸಾರುತ್ತಾ ಸ್ನೇಹದ,ಪ್ರೀತಿಯ,ಸಹಬಾಳ್ವೆಯ ದಿಟ್ಟ ಹೆಜ್ಜೆಗಳನ್ನು ಇಟ್ಟು ಮಾನವೀಯತೆಯ ಸಂದೇಶವನ್ನು ಮನುಕುಲಕ್ಕೆ ನೀಡಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ