ಕೋಝಿಕ್ಕೋಡ್:ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಯೆಮೆನ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಲಯಾಳಿ ನರ್ಸ್ ನಿಮಿಷಪ್ರಿಯಾ ಅವರ ಬಿಡುಗಡೆಗಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಮಧ್ಯಪ್ರವೇಶಿಸಿದ್ದಾರೆಂದು ಮಲಯಾಳಂ ಪತ್ರಿಕೆಗಳು ವರದಿ ಮಾಡಿದೆ.
ಅವರು, ಯೆಮೆನ್ನ ಪ್ರಮುಖ ಸೂಫಿ ವಿದ್ವಾಂಸರ ಮೂಲಕ ಯೆಮೆನ್ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಹತ್ಯೆಗೊಳಗಾದ ಯೆಮೆನ್ ಪ್ರಜೆ ತಲಾಲ್ ಸಹೋದರನೊಂದಿಗೂ ಸಂವಹನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆಶಾದಾಯಕ ಪ್ರತಿಕ್ರಿಯೆ ಲಭಿಸಿರುವುದಾಗಿ ಕಾಂತಪುರಂ ಉಸ್ತಾದರಿಗೆ ಸಂಬಂಧಿಸಿದಂತೆ ಮರ್ಕಝ್ ನಿಂದ ಮಾಹಿತಿ ಲಭಿಸಿದೆ. ಶಾಸಕ ಚಾಂಡಿ ಉಮ್ಮನ್ ಕೂಡ ಈ ವಿಷಯದಲ್ಲಿ ಕಾಂತಪುರಂ ಉಸ್ತಾದರ ಮಧ್ಯಪ್ರವೇಶವನ್ನು ಕೋರಿದ್ದರು.
ನಿಮಿಷಪ್ರಿಯ ಬಿಡುಗಡೆ ನೆರವು ಸಮಿತಿಗೆ ಯೆಮೆನ್ ಸುನ್ನಿ ವಿದ್ವಾಂಸ ಶೈಖ್ ಹಬೀಬ್ ಉಮರ್ ಬಿನ್ ಹಾಫಿಝ್ ಮೂಲಕ ಹತ್ಯೆಗೊಳಗಾದ ತಲಾಲ್ ಅಬ್ದುಲ್ ಮಹ್ದಿ ಅವರ ಸಂಬಂಧಿಕರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಲಾಯಿತು. ಮುಂದಿನ ದಿನಗಳಲ್ಲಿ ಹೆಚ್ಚಿನ ಚರ್ಚೆಗಳು ನಡೆಯುತ್ತವೆ ಎಂದು ಕಾಂತಪುರಂ ಎಪಿ ಅಬುಬಕರ್ ಮುಸ್ಲಿಯಾರ್ ಅವರ ಸಹಾಯಕರು ತಿಳಿಸಿದ್ದಾರೆ. ತಲಾಲ್ ಅವರ ಕುಟುಂಬವನ್ನು ಈ ಮೊದಲು ಸಂಪರ್ಕಿಸಲು ಕಾನೂನು ನೆರವು ಸಮಿತಿಗೆ ಸಾಧ್ಯವಾಗಿರಲಿಲ್ಲ. ಇದೀಗ ತಲಾಲ್ ಅವರ ಸಹೋದರನೊಂದಿಗೆ ಮಾತನಾಡಲು ಸಾಧ್ಯವಾಗಿರುವುದರಿಂದ ಶುಭ ನಿರೀಕ್ಷೆಯಿದೆ ಮತ್ತು ಚರ್ಚೆಗಳು ಮುಂದುವರಿದಿದೆ ಎಂದು ಕಾಂತಪುರಂ ಉಸ್ತಾದ್ ಸಂಬಂಧಿಸಿದ ಕೇಂದ್ರಗಳಿಂದ ತಿಳಿದು ಬಂದಿದೆ.
ಏತನ್ಮಧ್ಯೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಿಮಿಷಪ್ರಿಯ ಬಿಡುಗಡೆಗೆ ಸಂಬಂಧಿಸಿದಂತೆ ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಅವರು ಈ ವಿಷಯದಲ್ಲಿ ತಕ್ಷಣದ ಹಸ್ತಕ್ಷೇಪವನ್ನು ಕೋರಿದ್ದಾರೆ. ಈ ತಿಂಗಳ 16 ರಂದು ಮರಣದಂಡನೆ ವಿಧಿಸಲಾಗುವುದು ಎಂದು ತಿಳಿದುಬಂದಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ನಿಮಿಷಪ್ರಿಯ ಅವರ ಮರಣದಂಡನೆ ಶಿಕ್ಷೆಯನ್ನು ಈ ತಿಂಗಳ 16 ರಂದು ಜಾರಿಗೆ ತರಲಾಗುವುದು ಎಂದು ಜೈಲು ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಏತನ್ಮಧ್ಯೆ, ನಿಮಿಷಪ್ರಿಯ ಅವರ ಮರಣದಂಡನೆಯನ್ನು ನಿಲ್ಲಿಸಲು ಸಕ್ರಿಯ ಪ್ರಯತ್ನಗಳು ನಡೆಯುತ್ತಿವೆ. ಚರ್ಚೆಗಾಗಿ ಸನಾಗೆ ಬಂದಿದ್ದ ನಿಮಿಷಪ್ರಿಯ ಅವರ ತಾಯಿ ಮತ್ತು ಸಾಮಾಜಿಕ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರಾನ್ ಇನ್ನೂ ಯೆಮೆನ್ ನಲ್ಲೇ ಇದ್ದಾರೆ. ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಸಹ ಮಧ್ಯಪ್ರವೇಶಿಸುತ್ತಿರುವ ಸೂಚನೆಗಳಿವೆ.
ಪಾಲಕ್ಕಾಡ್ ಜಿಲ್ಲೆಯ ಕೊಲ್ಲಂಗೋಡ್ ಮೂಲದ ನಿಮಿಷಪ್ರಿಯಾ 2017 ರಿಂದ ಯೆಮೆನ್ ಜೈಲಿನಲ್ಲಿ ಬಂಧಿತರಾಗಿದ್ದಾರೆ. ಯೆಮೆನ್ ಪ್ರಜೆ ತಲಾಲ್ ಅಬ್ದುಲ್ ಮಹ್ದಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರು ತಪ್ಪಿತಸ್ಥರೆಂದು ಮರಣದಂಡನೆ ವಿಧಿಸಲಾಗಿದೆ. ಈ ತೀರ್ಪು ಜುಲೈ 16 ರಂದು ಜಾರಿಗೊಳಿಸಲಾಗುವುದು ಎಂದು ಯೆಮೆನ್ ಸುಪ್ರೀಂ ಕೋರ್ಟ್ ಈಗಾಗಲೇ ತಿಳಿಸಿದೆ.
ಇದೀಗ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ನೇರ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಅವರು, ಯೆಮೆನ್ ನಾಗರಿಕರ ಸಂಬಂಧಿಕರೊಂದಿಗೆ ನಡೆದ ಸಂವಾದದಿಂದ ಪ್ರಕರಣದಲ್ಲಿ ಭರವಸೆ ಮೂಡಿದ್ದು, ಈ ಬೆಳವಣಿಗೆಗಳು ನಿಮಿಷಪ್ರಿಯ ಬಿಡುಗಡೆಯ ಆಶಾಭಾವನೆ ಮೂಡಿಸಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ