ಹೊಸದಿಲ್ಲಿ :ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟು ಯೆಮೆನ್ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಗಲ್ಲುಶಿಕ್ಷೆ ತಡೆಯಲು ಭಾರತ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ, ಈ ವಿಷಯದಲ್ಲಿ ಭಾರತಕ್ಕೆ ತಲುಪಲು ಸಾಧ್ಯವಿರುವ ಮಿತಿಯನ್ನು ಸರಕಾರ ಈಗಾಗಲೇ ತಲುಪಿದೆ ಎಂದು ಸರಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಯೆಮೆನ್ ರಾಜತಾಂತ್ರಿಕವಾಗಿ ಗುರುತಿಸಲ್ಪಟ್ಟಿಲ್ಲ ಆದ್ದರಿಂದ ಸರಕಾರ ಹೆಚ್ಚಿನದನ್ನೇನೂ ಮಾಡಲು ಸಾಧ್ಯವಿಲ್ಲ.ಬ್ಲಡ್ ಮನಿ (Blood money) ವಿಚಾರ ಖಾಸಗಿ ಮಾತುಕತೆಯಾಗಿದೆ. ಸರಕಾರ ಖಾಸಗಿ ಮಾರ್ಗಗಳ ಮೂಲಕ ನಿಮಿಷಾ ಅವರನ್ನು ರಕ್ಷಿಸಲು ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ ಎಂದು ಸರಕಾರಿ ವಕೀಲ ಎಜಿ ವೆಂಕಟರಮಣಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಭಾರತ ಸರಕಾರ ಯಾವ ಹಂತಕ್ಕೆ ಹೋಗಬಹುದು ಎಂಬುದಕ್ಕೆ ಒಂದು ಮಿತಿಯಿದೆ. ನಾವು ಅದನ್ನು ತಲುಪಿದ್ದೇವೆ. ಯೆಮೆನ್ ಇತರ ದೇಶಗಳಂತೆ ಅಲ್ಲ. ನಾವು ಸಾರ್ವಜನಿಕವಾಗಿ ಮಾತನಾಡುವ ಮೂಲಕ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸಲು ಬಯಸಲಿಲ್ಲ. ನಾವು ಖಾಸಗಿ ಮಟ್ಟದಲ್ಲಿ ಪ್ರಯತ್ನಿಸುತ್ತಿದ್ದೇವೆ’ ಎಂದು ಸರಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ತಿಳಿಸಿದರು.
ಗಲ್ಲುಶಿಕ್ಷೆಯ ದಿನಾಂಕವನ್ನು ಈಗಾಗಲೇ ಯೆಮೆನ್ ನ್ಯಾಯಾಲಯ ಪ್ರಕಟಿಸಿದ್ದು, ಆ ಪ್ರಕಾರ ಇದೇ ತಿಂಗಳ 16 ನೇ ತಾರೀಖಿನಂದು ಗಲ್ಲುಶಿಕ್ಷೆ ಜಾರಿಯಾಗಲಿದೆ. ಏತನ್ಮಧ್ಯೆ ನಿಮಿಷಪ್ರಿಯಾ ಅವರ ಬಿಡುಗಡೆಗಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಮಧ್ಯಪ್ರವೇಶಿಸಿದ್ದಾರೆಂದು ಮಲಯಾಳಂ ಪತ್ರಿಕೆಗಳು ವರದಿ ಮಾಡಿದೆ.
ಅವರು, ಯೆಮೆನ್ನ ಪ್ರಮುಖ ಸೂಫಿ ವಿದ್ವಾಂಸರ ಮೂಲಕ ಯೆಮೆನ್ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು, ಹತ್ಯೆಗೊಳಗಾದ ಯೆಮೆನ್ ಪ್ರಜೆ ತಲಾಲ್ ಸಹೋದರನೊಂದಿಗೂ ಸಂವಹನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆಶಾದಾಯಕ ಪ್ರತಿಕ್ರಿಯೆ ಲಭಿಸಿರುವುದಾಗಿ ಕಾಂತಪುರಂ ಉಸ್ತಾದರಿಗೆ ಸಂಬಂಧಿಸಿದಂತೆ ಮರ್ಕಝ್ ಮೂಲಗಳಿಂದ ಮಾಹಿತಿ ಲಭಿಸಿದೆ.
ನಿಮಿಷಪ್ರಿಯ ಬಿಡುಗಡೆ ನೆರವು ಸಮಿತಿಗೆ ಯೆಮೆನ್ ಸುನ್ನಿ ವಿದ್ವಾಂಸ ಶೈಖ್ ಹಬೀಬ್ ಉಮರ್ ಬಿನ್ ಹಾಫಿಝ್ ಮೂಲಕ ಹತ್ಯೆಗೊಳಗಾದ ತಲಾಲ್ ಅಬ್ದುಲ್ ಮಹ್ದಿ ಅವರ ಸಂಬಂಧಿಕರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ನೆರವು ಸಮಿತಿಗೆ ಮೃತ ವ್ಯಕ್ತಿಯ ಸಂಬಂಧಿಕರನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಆಶಾದಾಯಕ ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ