ಕೋಝಿಕ್ಕೋಡ್ |ಜನರಿಗೆ ಒಳಿತನ್ನು ಮಾಡುವುದು ತನ್ನ ಕರ್ತವ್ಯ ಎಂಬ ನಂಬಿಕೆಯಿಂದ ಯೆಮೆನ್ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಪಾಲಕ್ಕಾಡ್ ಮೂಲದ ನಿಮಿಷಪ್ರಿಯ ಅವರ ಬಿಡುಗಡೆ ವಿಷಯದಲ್ಲಿ ಮಧ್ಯಪ್ರವೇಶಿಸಿರುವುದಾಗಿ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ. ಇಸ್ಲಾಂ ಒಂದು ಕೋಮು ಚಳುವಳಿಯಲ್ಲ ಎಂದು ಜಗತ್ತಿಗೆ ಕಲಿಸುವುದು ತಮ್ಮ ಗುರಿಯಾಗಿದೆ ಎಂದು ಕಾಂತಪುರಂ ಸ್ಪಷ್ಟಪಡಿಸಿದ್ದಾರೆ. ಮರ್ಕಝ್ನಲ್ಲಿ ನಡೆದ ಯುವ ಕೌಶಲ್ಯ ಸಮ್ಮೇಳನದಲ್ಲಿ ಮಾತನಾಡಿದ ಕಾಂತಪುರಂ ಇದನ್ನು ತಿಳಿಸಿದ್ದಾರೆ. ನಿಮಿಷಪ್ರಿಯ ಅವರ ಬಿಡುಗಡೆಯಲ್ಲಿ ಮಧ್ಯಪ್ರವೇಶಿಸಿದ ನಂತರ ಕಾಂತಪುರಂ ಅವರ ಮೊದಲ ಪ್ರತಿಕ್ರಿಯೆಯಾಗಿದೆ ಇದು.
ಮರಣದಂಡನೆಯ ಬದಲು ಮೃತರ ಸಂಬಂಧಿಕರಿಗೆ ‘ದಿಯಾ’ಧನವನ್ನು ನೀಡುವ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಅವಕಾಶವನ್ನು ಇಸ್ಲಾಂ ಹೊಂದಿದೆ ಇದರ ಆಧಾರದಲ್ಲಿ ನಾವು ಅಲ್ಲಿನ ವಿದ್ವಾಂಸರು ಮತ್ತು ನ್ಯಾಯಾಧೀಶರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಕಾಂತಪುರಂ ಸ್ಪಷ್ಟಪಡಿಸಿದ್ದಾರೆ.
ಚರ್ಚೆಗಳು ಪ್ರಗತಿಯಲ್ಲಿವೆ. ಮೃತರ ಕುಟುಂಬದ ಒಪ್ಪಿಗೆಯಿಲ್ಲದೆ ನ್ಯಾಯಾಲಯವು ಆರೋಪಿಗೆ ಮರಣದಂಡನೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯಲ್ಲಿ, ಪ್ರಸ್ತುತ ಅವರ ಕುಟುಂಬದೊಂದಿಗೆ ಚರ್ಚೆಗಳು ನಡೆಯುತ್ತಿವೆ. ಕುಟುಂಬವು ದಿಯಾಧನವನ್ನು ಸ್ವೀಕರಿಸಲು ಸಿದ್ಧವಾಗಿದೆಯೇ ಅಥವಾ ಇಲ್ಲವೇ ಎಂಬುದು ಪ್ರಮುಖ ವಿಷಯವಾಗಿದೆ ಎಂದು ಕಾಂತಪುರಂ ಹೇಳಿದರು.
ಇಸ್ಲಾಂ ಒಂದು ಕೋಮು ಚಳುವಳಿಯಲ್ಲ ಎಂದು ಕಾಂತಪುರಂ ಸ್ಪಷ್ಟಪಡಿಸಿದರು. ಜಗತ್ತಿಗೆ ಅದನ್ನು ಕಲಿಸಲು ಮತ್ತು ಜನರಿಗೆ ಒಳಿತನ್ನು ಮಾಡುವುದು ಕರ್ತವ್ಯವಾಗಿದೆ ಎಂಬ ಕಾರಣಕ್ಕೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲಾಗಿದೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಇಸ್ಲಾಂಪುರ ಹೆಸರನ್ನು ಶ್ರೀರಾಮಪುರ ಎಂದು ಬದಲಿಸಬೇಕು- ಬಿಜೆಪಿ ಶಾಸಕರ ಬೇಡಿಕೆಗೆ ಗ್ರಾಮಸ್ಥರ ವಿರೋಧ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ
ಡೆಲಿವರಿ ಡ್ರೈವರ್ಗಳಿಗೆ ಹವಾನಿಯಂತ್ರಿತ ವಿಶ್ರಾಂತಿ ಕೇಂದ್ರಗಳು – ದುಬೈ ಆರ್ಟಿಎ ಕೊಡುಗೆ