ಕೋಝಿಕ್ಕೋಡ್ |ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಪಾಲಕ್ಕಾಡ್ ಮೂಲದ ನಿಮಿಷಪ್ರಿಯ ಬಿಡುಗಡೆಗಾಗಿ ಭಾರತೀಯ ಗ್ರಾಂಡ್ ಮುಪ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ನೇತೃತ್ವದ ಮಧ್ಯಸ್ಥಿಕೆ ಫಲ ನೀಡುತ್ತಿದೆ. ನಾಳೆ ನಡೆಯಬೇಕಿದ್ದ ನಿಮಿಷಪ್ರಿಯ ಅವರ ಮರಣದಂಡನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಈ ಸಂಬಂಧ ಯೆಮೆನ್ ಅಧಿಕಾರಿಗಳ ಅಧಿಕೃತ ಪ್ರಕಟಣೆಯನ್ನು ಕಾಂತಪುರಂ ಉಸ್ತಾದರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ನಿಮಿಷಪ್ರಿಯ ಅವರ ಮರಣದಂಡನೆಯನ್ನು ಮುಂದೂಡುವ ತೀರ್ಪಿನ ಪ್ರತಿಯನ್ನು ಅಧಿಕೃತವಾಗಿ ಸ್ವೀಕರಿಸಲಾಗಿದೆ ಮತ್ತು ಇದಕ್ಕಾಗಿ ಕೆಲಸ ಮಾಡಿದ ಮತ್ತು ಪ್ರಾರ್ಥಿಸಿದ ಎಲ್ಲರಿಗೂ ಅಲ್ಲಾಹನ ಕರುಣೆ ಸಿಗಲಿ ಎಂದು ಕಾಂತಪುರಂ ಉಸ್ತಾದರು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿದ್ದಾರೆ.
ಪಬ್ಲಿಕ್ ಪ್ರಾಸಿಕ್ಯೂಟರ್ ಸೂಚನೆಯ ಮೇರೆಗೆ, ನಾಳೆ ನಡೆಯಬೇಕಿದ್ದ ಭಾರತೀಯ ನಾಗರಿಕ ನಿಮಿಷಾ ಪ್ರಿಯಾ ಟಾಮಿ ಥಾಮಸ್ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಯೆಮೆನ್ ಪಬ್ಲಿಕ್ ಪ್ರಾಸಿಕ್ಯೂಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದಿನ ಆದೇಶ ಬರುವವರೆಗೆ ಮರಣದಂಡನೆ ಶಿಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ದಿನ ಶಾಸಕ ಚಾಂಡಿ ಉಮ್ಮನ್ ಅವರ ಕೋರಿಕೆಯ ಮೇರೆಗೆ ಕಾಂತಪುರಂ ಉಸ್ತಾದರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದರು. ಕಾಂತಪುರಂ ಉಸ್ತಾದ್ ಅವರ ಕೋರಿಕೆಯ ಮೇರೆಗೆ, ಪ್ರಮುಖ ಯೆಮೆನ್ ವಿದ್ವಾಂಸ ಶೈಖ್ ಹಬೀಬ್ ಉಮರ್ ಬಿನ್ ಹಫೀಝ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದರು. ಎರಡು ದಿನಗಳ ಅನೌಪಚಾರಿಕ ಮಾತುಕತೆಯ ಅಂತಿಮ ಹಂತವಾಗಿ ನಿನ್ನೆ ಎರಡು ಬಾರಿ ಚರ್ಚೆಗಳು ನಡೆದವು. ಶೈಖ್ ಹಬೀಬ್ ಉಮರ್ ಅವರ ಸೋದರಳಿಯ ಹಬೀಬ್ ಅಬ್ದುರಹ್ಮಾನ್ ಅಲಿ ಮಶ್ಹೂರ್ ಚರ್ಚೆಗಳನ್ನು ಮುನ್ನಡೆಸುತ್ತಿದ್ದಾರೆ.

ಯೆಮೆನ್ ಅಧಿಕಾರಿಗಳ ಪ್ರಕಟಣೆ
https://www.facebook.com/share/1B8ukqbmD1/
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ