ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ನಿರ್ದೇಶನದಂತೆ ಜಿಲ್ಲಾ ಘಟಕಗಳಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ದ. ಕ ಈಸ್ಟ್ ಜಿಲ್ಲಾ ದಅವಾ ಸೆನ್ಸೋರಿಯಂ ವಿಟ್ಲದ ಬ್ರೈಟ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ವ್ಯಾಪ್ತಿಯ 20ಕ್ಕೂ ಮಿಕ್ಕ ದರ್ಸ್ ಹಾಗೂ ದಅವಾ ಕಾಲೇಜುಗಳಿಂದ ಸುಮಾರು 300ರಷ್ಟು ವಿದ್ಯಾರ್ಥಿಗಳು ಭಾಗವಹಿಸಿದರು.

ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷರಾದ ಇಂಜಿನಿಯರ್ ಶಫೀಕ್ ಸಅದಿ ಅಧ್ಯಕ್ಷತೆಯಲ್ಲಿ, ಸಯ್ಯಿದ್ ಸಾಬಿತ್ ತಂಙಳ್ ಪಾಟ್ರಕೋಡಿ ದುಆ ನೆರವೇರಿಸಿ, ವಿಟ್ಲ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಅಬ್ದುಲ್ ಖಾದರ್ ಫೈಝಿ ಉದ್ಘಾಟಿಸಿ, ಅಶ್ರಫ್ ಸಖಾಫಿ ಕನ್ಯಾನ, ಸಲೀಂ ಹಾಜಿ ಬೈರಿಕಟ್ಟೆ, ಅಬ್ದುರ್ರಹ್ಮಾನ್ ಶರಫಿ ಶುಭ ನುಡಿಗಳನ್ನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇರಳ ಎಸ್ಸೆಸ್ಸೆಫ್ ಕೋಶಾಧಿಕಾರಿ ಅನಸ್ ಅಮಾನಿ ಪುಷ್ಪಗಿರಿ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಬೇಕಾದ ಅನೇಕ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು. ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲಿ ತುರ್ಕಳಿಕೆ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮುಹಮ್ಮದ್ ಮಿಸ್ಬಾಹಿ ಸಂಘಟನೆಯ ಮಹತ್ವ ಮತ್ತು ಅನಿವಾರ್ಯತೆ ಬಗ್ಗೆ ಮಾತನಾಡಿದರು.
ದೇಶದ ವಿವಿಧ ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಶಿಕ್ಷಣದಿಂದ ವಂಚಿತರಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ನೈತಿಕತೆಯನ್ನು ಬೋಧಿಸಿ ಸುಶಿಕ್ಷಿತ ಸಮಾಜ ನಿರ್ಮಾಣದ ಕನಸನ್ನು ಹೊಂದಿದ ರಾಷ್ಟ್ರೀಯ ಎಸ್ಸೆಸ್ಸೆಫ್ ನ ಬಹುದೊಡ್ಡ ಯೋಜನೆಯಾದ ‘ಒನ್ ಡ್ರಾಪ್’ ಗೆ ಜಿಲ್ಲಾ ಮಟ್ಟದಲ್ಲಿ ಚಾಲನೆ ನೀಡಲಾಯಿತು.
ಕಂಬಳಬೆಟ್ಟು ಉಸ್ತಾದ್, ಯೂಸುಫ್ ಹಾಜಿ ಶಾಜ, ಬ್ರೈಟ್ ಇಬ್ರಾಹಿಂ ಹಾಜಿ, ಇಸ್ಮಾಈಲ್ ಮಾಸ್ಟರ್ ಸಹಿತವಿರುವ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ನ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆತಿಥ್ಯ ವಹಿಸಿದ ವಿಟ್ಲ ಡಿವಿಷನ್ ಸಮಿತಿ ಹಾಗೂ ಎಸ್ ವೈ ಎಸ್ ಇಸಾಬಾ ಕಾರ್ಯಕರ್ತರು ಆಗಮಿಸಿದ ಎಲ್ಲರನ್ನೂ ಆತ್ಮೀಯವಾಗಿ ಸತ್ಕರಿಸಿದರು.
ಜಿಲ್ಲಾ ಸದಸ್ಯರಾದ ಅತಾವುಲ್ಲಾ ಹಿಮಮಿ ಕುಪ್ಪೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಯಾಝ್ ಎಲಿಮಲೆ, ಉಪಾಧ್ಯಕ್ಷರಾದ ಸಿದ್ದೀಕ್ ಹಿಮಮಿ ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಿಕೊಟ್ಟರು. ಜಿಲ್ಲಾ ಸದಸ್ಯರು ಹಾಗೂ ವಿಟ್ಲ ಡಿವಿಷನ್ ಅಧ್ಯಕ್ಷರಾದ ಆಬಿದ್ ಸಖಾಫಿ ಪೆರುವಾಯಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ