ಮಸ್ಕತ್ : ಕೆ.ಸಿ.ಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಪ್ರವಾದಿ ಮುಹಮ್ಮದ್ ﷺ ರವರ 1500ನೇ ಜನ್ಮದಿನಾಚರಣೆಯ ಪ್ರಯುಕ್ತ, 2025ರ ಸೆಪ್ಟೆಂಬರ್ 19ರಂದು (ಶುಕ್ರವಾರ) ಗೊಲ್ಡನ್ ತುಲಿಪ್ ರುವಿ ಸಭಾಂಗಣದಲ್ಲಿ ನಡೆಯಲಿರುವ “ಪ್ರವಾದಿ ﷺ ಕಾಲಾತೀತ ಮಾರ್ಗದರ್ಶಿ” ಎಂಬ ಶೀರ್ಷಿಕೆಯ ಬೃಹತ್ ಮಿಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಇತ್ತೀಚೆಗೆ ಸೀಬ್ ಮದರಸ ಸಭಾಂಗಣದಲ್ಲಿ ನಡೆದ ಸ್ವಾಗತ ಸಮಿತಿ ರಚನಾ ಸಭೆಯು ಕೆ.ಸಿ.ಎಫ್ ಒಮಾನ್ ಅಧ್ಯಕ್ಷ ಹಂಝ ಹಾಜಿ ಕನ್ನಂಗಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಗೆ ಕೆ.ಸಿ.ಎಫ್ ಒಮಾನ್ ಶಿಕ್ಷಣ ವಿಭಾಗದ ಅಧ್ಯಕ್ಷ ಉಬೈದುಲ್ಲಾ ಸಖಾಫಿ ಮಿತ್ತೂರು ದುಆದೊಂದಿಗೆ ಚಾಲನೆ ನೀಡಿದರು. ಬಳಿಕ, ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿಯ ಇಹ್ಸಾನ್ ವಿಭಾಗದ ಚೆಯರ್ಮನ್ ಅಯ್ಯೂಬ್ ಕೋಡಿ ಸಭೆಯನ್ನು ಉದ್ಘಾಟಿಸಿದರು.
ಈ ಬೃಹತ್ ಸಮಾವೇಶದ ಸ್ವಾಗತ ಸಮಿತಿಗೆ ಕೆಳಕಂಡವರನ್ನು ನೇಮಕ ಮಾಡಲಾಯಿತು:
• ಚೆಯರ್ಮನ್: ಆಬಿದ್ ಪಾಶ ಬಾಳೆಹೊನ್ನೂರ್ (ಒವೈಸ್ ಇಂಟರ್ನ್ಯಾಶನಲ್)
ವರ್ಕಿಂಗ್ ಚೇರ್ಮನ್: ಅಯ್ಯೂಬ್ ಕೋಡಿ
• ಜನರಲ್ ಕನ್ವೀನರ್: ಸಯ್ಯದ್ ಆಬಿದ್ ತಂಙಲ್ ಎಮ್ಮೆಮಾಡು
• ಫಿನಾನ್ಸಿಯಲ್ ಕಂಟ್ರೋಲರ್: ಹಸೀಫ್ ಇಕ್ಬಾಲ್ ಕಂದಾವರ
• ಸಹ ಕನ್ವೀನರ್ಗಳು: ಹನೀಫ್ ಮನ್ನಾಪು, ಲತೀಫ್ ಮಂಜೇಶ್ವರ
• ಫೈನಾನ್ಸಿಯಲ್ ಕನ್ವೀನರ್ಗಳು: ಉಮರ್ ಸಖಾಫಿ ಎಡಪ್ಪಾಲ, ಆರಿಫ್ ಕೋಡಿ ಮತ್ತು 101 ಸದಸ್ಯರನ್ನೊಳಗೊಂಡ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಸಭೆಯಲ್ಲಿ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಂಶುದ್ದೀನ್ ಪಾಲೆತಡ್ಕ, ಅಂತರಾಷ್ಟ್ರೀಯ ಸಮಿತಿ ಸದಸ್ಯರಾದ ಇಬ್ರಾಹಿಂ ಹಾಜಿ ಅತ್ರಾಡಿ, ರಾಷ್ಟ್ರೀಯ ಸಮಿತಿ ನಾಯಕರಾದ ಸ್ವಾದಿಕ್ ಹಾಜಿ ಸುಳ್ಯ, ಝುಬೈರ್ ಸಅದಿ, ಹಾರಿಸ್ ಕೊಳಕೇರಿ, ಆದಂ ಮದನಿ, ಹುಸೈನ್ ತೀರ್ಥಹಳ್ಳಿ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
ಸ್ವಾಗತ ಸಮಿತಿ ಕನ್ವೀನರ್ ಲತೀಫ್ ಮಂಜೇಶ್ವರ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ