ಬೆಂಗಳೂರು,ಜು.26: ಸುನ್ನೀ ಯುವಜನ ಸಂಘ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯಕಾರಿ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮೌಲಾನಾ ಶಾಫಿ ಸಅದಿಯವರು, ಇತ್ತೀಚೆಗೆ ಕರಾವಳಿ ಭಾಗದಲ್ಲಿ ಸಂಚಲನ ಮೂಡಿಸಿದ ಎಸ್ ವೈ ಎಸ್ ಸೌಹಾರ್ದ ಸಂಚಾರದ ಬಗ್ಗೆ ರಾಜ್ಯ ಸಮಿತಿಯನ್ನು ಅಭಿನಂದಿಸಿದರು.

ಇದೇ ವೇಳೆ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೌಲಾನಾ ಎನ್ ಕೆ ಎಂ ಶಾಫಿ ಸಅದಿ ಅವರನ್ನು ಎಸ್ವೈಎಸ್ ರಾಜ್ಯ ಸಮಿತಿಯ ವತಿಯಿಂದ ಗೌರವಿಸಲಾಯಿತು.
ಸಮಿತಿಯ ರಾಜ್ಯಾಧ್ಯಕ್ಷರಾದ ಬಶೀರ್ ಸಅದಿ ಪೀಣ್ಯ , ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ , ಕೋಶಾಧಿಕಾರಿ ಮನ್ಸೂರ್ ಅಲಿ ಕೋಟು ಗದ್ದೆ ಸಹಿತ ಸಮಿತಿಯ ರಾಜ್ಯ ನಾಯಕರು ಸಭೆಯಲ್ಲಿ ಹಾಜರಿದ್ದರು.
ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿರುವ ಶಾಫಿ ಸಅದಿಯವರು “ಸಂಘಟನೆಯ ಅನುಭವಸ್ಥ ಸಕ್ರಿಯ ನಾಯಕರನ್ನು ಒಳಗೊಂಡಿರುವ ಎಸ್ ವೈ ಎಸ್ ರಾಜ್ಯ ಸಮಿತಿ, ಸಂಘಟನೆಯ ಚುರುಕಾದ ಕಾರ್ಯಚಟುವಟಿಕೆಗಳಿಂದ ಕೂಡಿರುವ ಬಲಿಷ್ಠ ನಾಯಕರನ್ನು ಒಳಗೊಂಡಿದೆ” ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ