janadhvani

Kannada Online News Paper

ನಿಮಿಷಪ್ರಿಯ ಮರಣದಂಡನೆ ರದ್ದತಿಗೆ ಒಪ್ಪಿಗೆ- ಶೀಘ್ರದಲ್ಲೇ ಅಂತಿಮ ನಿರ್ಧಾರ

ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂತಪುರಂ ಉಸ್ತಾದ್ ಸ್ಪಷ್ಟಪಡಿಸಿದ್ದಾರೆ.

ಕೋಝಿಕ್ಕೋಡ್ | ನಿಮಿಷಪ್ರಿಯ ಅವರ ಮರಣದಂಡನೆಯನ್ನು ರದ್ದುಗೊಳಿಸಲು ಒಪ್ಪಿಗೆ ಲಭಿಸಿರುವುದಾಗಿ ಭಾರತೀಯ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಿಸಿದೆ. ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂತಪುರಂ ಉಸ್ತಾದ್ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚರ್ಚೆಗಳ ಆಧಾರದ ಮೇಲೆ ಮರಣದಂಡನೆಯನ್ನು ರದ್ದುಗೊಳಿಸಲು ಮತ್ತು ಇತರ ವಿಷಯಗಳ ಬಗ್ಗೆ ನಿರ್ಧರಿಸಲು ಒಪ್ಪಿಗೆ ನೀಡಲಾಗಿದೆ.ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.

ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೈಖ್ ಉಮರ್ ಬಿನ್ ಹಫೀಝ್ ತಂಙಳ್ ನೇಮಿಸಿದ ಯೆಮೆನ್ ವಿದ್ವಾಂಸರ ನಿಯೋಗದ ಜೊತೆಗೆ, ಉತ್ತರ ಯೆಮೆನ್ ಆಡಳಿತಗಾರರು ಮತ್ತು ಅಂತರರಾಷ್ಟ್ರೀಯ ರಾಜತಾಂತ್ರಿಕರು ಭಾಗವಹಿಸಿದ್ದ ಮಧ್ಯಸ್ಥಿಕೆ ಮಾತುಕತೆಯ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೃತ ತಲಾಲ್ ಅವರ ಕುಟುಂಬದೊಂದಿಗೆ ಹೆಚ್ಚಿನ ಚರ್ಚೆಗಳ ನಂತರ ಇತರ ವಿಷಯಗಳನ್ನು ನಿರ್ಧರಿಸಲಾಗುತ್ತದೆ. ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಕಾಂತಪುರಂ ಅವರ ಮಧ್ಯಪ್ರವೇಶ ನಂತರ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.

ಇದನ್ನೂ ಓದಿರಿ...