ಕೋಝಿಕ್ಕೋಡ್ | ನಿಮಿಷಪ್ರಿಯ ಅವರ ಮರಣದಂಡನೆಯನ್ನು ರದ್ದುಗೊಳಿಸಲು ಒಪ್ಪಿಗೆ ಲಭಿಸಿರುವುದಾಗಿ ಭಾರತೀಯ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಿಸಿದೆ. ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂತಪುರಂ ಉಸ್ತಾದ್ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚರ್ಚೆಗಳ ಆಧಾರದ ಮೇಲೆ ಮರಣದಂಡನೆಯನ್ನು ರದ್ದುಗೊಳಿಸಲು ಮತ್ತು ಇತರ ವಿಷಯಗಳ ಬಗ್ಗೆ ನಿರ್ಧರಿಸಲು ಒಪ್ಪಿಗೆ ನೀಡಲಾಗಿದೆ.ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.
ಭಾರತೀಯ ಗ್ರಾಂಡ್ ಮುಫ್ತಿಯ ಕೋರಿಕೆಯ ಮೇರೆಗೆ ಶೈಖ್ ಉಮರ್ ಬಿನ್ ಹಫೀಝ್ ತಂಙಳ್ ನೇಮಿಸಿದ ಯೆಮೆನ್ ವಿದ್ವಾಂಸರ ನಿಯೋಗದ ಜೊತೆಗೆ, ಉತ್ತರ ಯೆಮೆನ್ ಆಡಳಿತಗಾರರು ಮತ್ತು ಅಂತರರಾಷ್ಟ್ರೀಯ ರಾಜತಾಂತ್ರಿಕರು ಭಾಗವಹಿಸಿದ್ದ ಮಧ್ಯಸ್ಥಿಕೆ ಮಾತುಕತೆಯ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೃತ ತಲಾಲ್ ಅವರ ಕುಟುಂಬದೊಂದಿಗೆ ಹೆಚ್ಚಿನ ಚರ್ಚೆಗಳ ನಂತರ ಇತರ ವಿಷಯಗಳನ್ನು ನಿರ್ಧರಿಸಲಾಗುತ್ತದೆ. ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಕಾಂತಪುರಂ ಅವರ ಮಧ್ಯಪ್ರವೇಶ ನಂತರ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)