ದುಬೈ: ಕೆಸಿಎಫ್ ದುಬೈ ಸೌತ್ ಝೋನ್ ಪ್ರತಿ ವರ್ಷ ನಡೆಸುತ್ತಿರುವ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ನ 2025 ನೇ ಸಾಲಿನ ಕಾರ್ಯಕ್ರಮದ ಸ್ವಾಗತ ಸಮಿತಿಯ ರಚನೆಯು ದುಬೈ ಬಿಸಿನೆಸ್ ಬೇ ಯಲ್ಲಿರುವ ಬೇ ಬೈಟ್ಸ್ ಹೋಟೇಲಿನಲ್ಲಿ ಆಗಸ್ಟ್ .3 ಭಾನುವಾರದಂದು ನಡೆಯಿತು.
ಸಭೆಯನ್ನುಧ್ಧೇಶಿಸಿ ಮಾತನಾಡಿದ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿಯವರು ಪ್ರವಾದಿ (ಸ.ಅ) ರವರ 1500 ನೇ ಜನ್ಮ ದಿನಾಚರಣೆಯನ್ನು ದುಬೈ ಸೌತ್ ಝೋನ್ ಈ ಬಾರಿ ವಿಜೃಂಭಣೆಯಿಂದ ಆಚರಿಸಲಿದೆ. ಪ್ರವಾದಿ ಕೀರ್ತನೆಗಳು ಮತ್ತು ಮದ್ಹ್ ಪ್ರಭಾಷಣಗಳನ್ನೊಳಗೊಂಡ ಪ್ರಸ್ತುತ ಗ್ರಾಂಡ್ ಮಿಲಾದ್ ಕಾನ್ಫರೆನ್ಸ್-2025, ಸೆಪ್ಟೆಂಬರ್ 21 ಭಾನುವಾರ, ದುಬೈ ಊದ್ ಮೇತ ಪಾಕಿಸ್ತಾನ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲರೂ ಕೈಜೊಡಿಸಬೇಕೆಂದು ಕರೆ ನೀಡಿದರು.
ಸ್ವಾಗತ ಸಮಿತಿಯ ಚೇರ್ಮ್ಯಾನ್ ಆಗಿ ಇಕ್ಬಾಲ್ ಸಿಧ್ಧಕಟ್ಟೆ, ವರ್ಕಿಂಗ್ ಚೇರ್ಮ್ಯಾನ್ ನಝೀರ್ ಹಾಜಿ ಕೆಮ್ಮಾರ, ಕನ್ವೀನರ್ ರಜಬ್ ಉಚ್ಚಿಲ, ವರ್ಕಿಂಗ್ ಕನ್ವೀನರ್ ಆಸಿಫ್ ಇಂದ್ರಾಜೆ, ಫಿನಾನ್ಶ್ಯಲ್ ಚೇರ್ಮ್ಯಾನ್ ಇಲ್ಯಾಸ್ ಮೂಳೂರು, ಫಿನಾನ್ಸ್ ಕನ್ವೀನರ್ ರವೂಫ್ ಸಾಗರ, ಅಶ್ಫಾಕ್ ಕೊಡಗು ಹಾಗೂ ಖಾದರ್ ಕಯ್ಯೂರು ಸೇರದಂತೆ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಕೆಸಿಎಫ್ ದುಬೈ ಸೌತ್ ಝೊನ್ ಅಧ್ಯಕ್ಷ ಇಲ್ಯಾಸ್ ಮದನಿ ಬರ್ಷಾ ವಹಿಸಿದರು. ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಸಖಾಫಿ ಉಧ್ಘಾಟಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಾಳಾಗಿ ಕೆಸಿಎಫ್ ಸಂಘಟನಾ ನಾಯಕರು ಗಳಾದ ರಜಬ್ ಉಚ್ಚಿಲ, ಹಮೀದ್ ಹಾಜಿ ಸ್ಟಾರ್ ಲಿಂಕ್, ಇಲ್ಯಾಸ್ ಮೂಳೂರು, ರವೂಫ್ ಸಾಗರ, ನವಾಝ್ ಹಾಜಿ ಕೋಟೆಕಾರ್, ನಝೀರ್ ಹಾಜಿ, ಇಕ್ಬಾಲ್ ಹಾಜಿ ಸಿಧ್ಧಕಟ್ಟೆ ಸೇರಿದಂತೆ, ಝೋನ್, ಸೆಕ್ಟರ್ ಹಾಗೂ ಶಾಖೆಯ ನಾಯಕರು ಭಾಗವಹಿಸಿದ್ದರು.
ಝೋನ್ ಕಾರ್ಯದರ್ಶಿ ಮನ್ಸೂರ್ ಹರೇಕಳ ಸ್ವಾಗತಿಸಿದರು, ರಫೀಕ್ ಕಲ್ಲಡ್ಕ ವಂದಿಸಿದರು. ಅಝೀಝ್ ಅಹ್ಸನಿ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ