ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು ಹಿರಿಯ ಪ್ರಾಥಮಿಕ ಶಾಲೆಯ 1985 ನೇ ವರ್ಷದ ಏಳನೇ ತರಗತಿಯ ವಿದ್ಯಾರ್ಥಿಗಳ ಮರು ಸಂಗಮ “ರಿಯೂನಿಯನ್-25” ಕಳೆದ ಆಗಸ್ಟ್ ರಂದು ನಡೆಯಿತು. ಮಂಗಳೂರು ಪಂಪ್ ವೆಲ್ ನಲ್ಲಿರುವ, ಕುಡ್ಲ ಹಿಲ್ಸ್ ನ “ದಾಹ್ ಮಾನ್ಶನ್” ಸಭಾಂಗಣ, 40 ವರ್ಷಗಳ ಬಳಿಕದ ಈ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಯಿತು.
ದೇಶ ವಿದೇಶದ ಬೇರೆ ಬೇರೆ ಕಡೆ ಇದ್ದ ಸಹಪಾಠಿಗಳು ಭಾಗವಹಿಸಿ ಬಾಲ್ಯದ ಶಾಲಾ ದಿನಗಳ ರಸ ನಿಮಿಷಗಳನ್ನು ಮೆಲುಕು ಹಾಕುವ ಮೂಲಕ ಹಾಗೂ ತಮ್ಮ ಅಧ್ಯಾಪಕರನ್ನು ಗೌರವದಿಂದ ಸ್ಮರಿಸುವ ಮೂಲಕ ಈ ದಿನವನ್ನು ಸ್ಮರಣೀಯಗೊಳಿಸಿದರು. ಹಲವು ವರ್ಷಗಳ ನಂತರ ಬಾಲ್ಯದ ಸ್ನೇಹಿತರು ಪರಸ್ಪರ ಭೇಟಿಯಾಗಿ ಭಾವುಕಗೊಳ್ಳುವ ರೋಮಾಂಚನ ಕ್ಷಣಕ್ಕೆ ಈ ಸಂಗಮ ಸಾಕ್ಷಿಯಾಯಿತು. ಸಹಪಾಠಿ ಮಿತ್ರ ಅಬ್ದುಲ್ ರಝಾಕ್ (ಇಂಜಿನಿಯರ್ ದುಬೈ) ಈ ಸಂಗಮವನ್ನು ಆಯೋಜಿಸಿ ಸಹಪಾಠಿಗಳನ್ನು ಆಹ್ವಾನಿಸಿದ್ದರು. ಇವರ ಆಹ್ವಾನವನ್ನು ಗೌರವಿಸಿ ಊರಿನಲ್ಲಿರುವ ಹಾಗೂ ಬೆಂಗಳೂರು, ಗೋವಾ, ದುಬೈ ಹಾಗೂ ಕುವೈಟ್ ನಲ್ಲಿ ನೆಲೆಸಿರುವ ಗೆಳೆಯರೂ ಬಿಡುವು ಮಾಡಿಕೊಂಡು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಶೇಷ ಆಹ್ವಾನಿತರಾಗಿದ್ದ, ಖ್ಯಾತ ಮೋಟಿವೇಷನಲ್ ಸ್ಪೀಕರ್ ಹಾಗೂ ಕೌನ್ಸಿಲಿಂಗ್ ತಜ್ಞ ರಫೀಕ್ ಮಾಸ್ಟರ್ ರವರು ತಮ್ಮ ಚಿಂತನೀಯ ಹಾಗೂ ಸ್ಫೂರ್ತಿಯುತ ಮಾತುಗಳ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಸಹಪಾಠಿ ಮಿತ್ರರು ಹಾಡು ಹಾಗೂ ಮಾತಿನ ಮೂಲಕ ನೆರೆದವರನ್ನು ರಂಜಿಸಿದರು. ಕಾರ್ಯಕ್ರಮದ ಆಯೋಜಕರಾದ ಇಂಜಿನಿಯರ್ ಅಬ್ದುಲ್ ರಝಾಕ್ ವಿವಿಧ ಪಾನೀಯ ಹಾಗೂ ಭಕ್ಷ್ಯ ಪದಾರ್ಥಗಳ ಭರ್ಜರಿ ಔತಣಕೂಟವನ್ನೂ ಏರ್ಪಡಿಸಿದ್ದರಲ್ಲದೆ, ಆಗತರಿಗೆಲ್ಲ ವಿಶೇಷ ಉಡುಗೊರೆಯನ್ನೂ ಕೊಟ್ಟು ಕೌತುಕಗೊಳಿಸಿದರು.
ಕೆಲವು ಸಹಪಾಠಿಗಳು ಕುಟುಂಬ ಸಹಿತವಾಗಿ ಆಗಮಿಸಿದ್ದು ವಿಶೇಷವಾಗಿತ್ತು. ಈ ತಂಡದ ವತಿಯಿಂದ ಕಲಿತ ಶಾಲೆಗೆ ಏನಾದರೊಂದು ಕೊಡುಗೆ ನೀಡುವ ಬಗ್ಗೆಯೂ ಚರ್ಚಿಸಲಾಯಿತು. ಅಬ್ದುಲ್ ರಝಾಕ್ ನಾವೂರು ಸ್ವಾಗತಿಸಿದರು. ಫಾ. ವಿನ್ಸೆಂಟ್ (ಸಿ.ಒ.ಡಿ.ಪಿ. ಮಂಗಳೂರು), ವರ್ಗೀಸ್ ಪಿ (ಪೊಲೀಸ್ ಅಧಿಕಾರಿ-ಇಂಟಲಿಜೆನ್ಸ್ ವಿಭಾಗ), ಪೊಲಿಕಾರ್ಪ್ ಡಿಸೋಜ( ಉದ್ಯಮಿ, ಬೆಂಗಳೂರು), ಮುಹಮ್ಮದ್ ನೂರುದ್ದೀನ್ ( ಕುವೈಟ್), ವಿಜಯ ಲೋಬೋ, ವಿಶ್ವನಾಥ, ಡೀಕಯ್ಯ, ರಾಜೇಂದ್ರ, ಕೇಶವ, ಉಮಾವತಿ, ದೀಪಿಕ, ಜೆಸಿಂತ, ವಿನ್ನಿ, ಸೇವರಿನ್, ಜೋಹರಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಆಯೋಜನೆಗಾಗಿ ಇಂಜಿನಿಯರ್ ಅಬ್ದುಲ್ ರಝಾಕ್ ರವರನ್ನು ಹಾಗೂ ಸಹಪಾಠಿಗಳ ವಾಟ್ಸಾಪ್ ಗ್ರೂಪ್ ರಚನೆ ಮತ್ತು ಸಂಯೋಜನೆಗಾಗಿ ಜೊಹರಾ ರವರನ್ನು ಸನ್ಮಾನಿಸಲಾಯಿತು. ಹಮೀದ್ ಎನ್ಎಸ್ ಕಾರ್ಯಕ್ರಮ ನಡೆಸಿಕೊಟ್ಟರು. ಫಾ. ವಿನ್ಸೆಂಟ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ