ನರಿಂಗಾನ: ಅಲ್ ಮದೀನ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆ, ಝೀಕ್ಯೂ ಪ್ರಿಸ್ಕೂಲ್, ಪಿಯು ಹಾಗೂ ಡಿಗ್ರಿ ಕಾಲೇಜುಗಳ ಜಂಟಿ ಆಶ್ರಯದಲ್ಲಿ ‘ ದಿಲ್ ಕೀ ಆಝಾದಿ’ ಧ್ಯೇಯ ವಾಕ್ಯದಡಿಯಲ್ಲಿ 79 ನೇ ಸ್ವಾತಂತರಿಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ರೌಳಾ ಮದೀನಾದ ನಿರ್ದೇಶಕ ಮುಹಮ್ಮದ್ ಕುಂಞಿ ಅಮ್ಜದಿ ಧ್ವಜಾರೋಹಣ ಗೈದರು. ನರಿಂಗಾನ ಪಂಚಾಯತ್ ಅಧ್ಯಕ್ಷ ನವಾಝ್ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡೆಮಿಕ್ ಡೈರೆಕ್ಟರ್ ಅಬುಸಾಲಿಹ್ ಅಝ್ಹರಿ, ಮುನೀರ್ ಸಖಾಫಿ ಮಾತನಾಡಿದರು. ವಿದ್ಯಾರ್ಥಿಗಳ ಪರವಾಗಿ ಆಲಂ ರೈಫ್ ಮತ್ತು ಮುಹಮ್ಮದ್ ಇಶಾನ್ ಭಾಷಣ ಮಾಡಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಡು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಬಿಡುಗಡೆಗೊಂಡ ಕಿಡ್ಸ್ ಗಾರ್ಡನ್ ಬ್ಲಾಕ್ ವಿದ್ಯಾರ್ಥಿಗಳ ಹಸ್ತಲಿಖಿತ ಮ್ಯಾಗಜಿನ್ ಗಮನಸೆಳೆಯಿತು.
ಉಪನ್ಯಾಸಕ ಅಬ್ದುಲ್ ರಝಾಕ್ ಮಾಸ್ಟರ್, ಸದರ್ ಉಸ್ತಾದ್ ಅಬೂಬಕರ್ ಮದನಿ ಪಡಿಕ್ಕಲ್, ಕನ್ನಡ ಮಾಧ್ಯಮ ಶಾಲಾ ಮುಖ್ಯ ಅಧ್ಯಾಪಕ ಮುಹಮ್ಮದ್ ಸರ್ ಸಂದೇಶ ನೀಡಿದರು. ಶಾಲಾ ಪ್ರಾಂಶುಪಾಲ ಮನ್ಸೂರ್ ಹಿಮಮಿ ಸ್ವಾಗತಿಸಿದರು. ವಿದ್ಯಾರ್ಥಿನಿ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. ಪದವಿ ಕಾಲೇಜು ಪ್ರಾಂಶುಪಾಲ ಸಂಶೀರ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ