ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಸನ್ನದ್ಧ ಸೇವಾ ತಂಡ ಸಾಂತ್ವನ -ಇಸಾಬ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ಸಲ್ಲಲ್ಲಾಹು ಅಲೈಹಿ ರವರ 1500 ನೇ ಜನ್ಮ ದಿನವನ್ನು ಸ್ವಾಗತಿಸುವ ಸಲುವಾಗಿ ಜಿಲ್ಲಾ ಮಟ್ಟದ ಸ್ವಚ್ಚತಾ ಶಿಬಿರವನ್ನು ವೆನ್ಲಾಕ್ ಆಸ್ಪತ್ರೆಯ ಪರಿಸರವನ್ನು ಸ್ವಚ್ಛ ಗೊಳಿಸುವ ಮೂಲಕ ಉದ್ಘಾಟಿಸಲಾಯಿತು.
ವೆನ್ಲಾಕ್ ಆಸ್ಪತ್ರೆಯ ಡಿ ಎಂ ಒ ಡಾಕ್ಟರ್ ಶಿವಪ್ರಕಾಶ್ ರವರು ಶಿಬಿರವನ್ನು ಉದ್ಘಾಟಿಸಿ, ಸಮಾಜ ಸೇವೆ ಮಾಡಿದರೆ ಅದರಲ್ಲೂ ರೋಗಿಗಳ ಸೇವೆ, ಅವರು ಬರುವ ಆಸ್ಪತ್ರೆಯಲ್ಲಿ ಸೇವೆ ಮಾಡುವುದೆಂದರೆ ಪರಮಾತ್ಮನ ಕೃಪೆಯನ್ನು ಪಡೆಯಲಿಕ್ಕೆ ಸಾಧ್ಯವಿದೆ. ಎಸ್ ವೈ ಎಸ್ ಸಾಂತ್ವನ ಇಸಾಬ ತಂಡದವರು ಸ್ವಯಂ ಸೇವಕ ರಾಗಿ ಬಂದು ಶ್ರಮದಾನ ನಡೆಸುತ್ತಿರುವುದು ಅತ್ಯಂತ ಪ್ರಶಂಸನೀಯ ಎಂದು ಹೇಳಿದರು.
ಸ್ವಚ್ಚತಾ ಶಿಬಿರದಲ್ಲಿ 70ರಷ್ಟು ಇಸಾಬ ಕಾರ್ಯಕರ್ತರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದರು.
ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಇದರ ಅಧ್ಯಕ್ಷ ಮಹಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆ ವಹಿಸಿದರು. ಇಸಾಬ ಸಾಂತ್ವನ ದಕ ಜಿಲ್ಲಾ ಮುಖ್ಯಸ್ಥ ಹಾಫಿಳ್ ಯಾಕೂಬ್ ಸಅದಿ ನಾವೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್ ವೈ ಎಸ್ ರಾಜ್ಯ ಕೋಶಾಧಿಕಾರಿ ಮನ್ಸೂರ್ ಅಲಿ ಶಿವಮೊಗ್ಗ, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷ
ಇಬ್ರಾಹಿಂ ಖಲೀಲ್ ಮಾಲಿಕಿ ಬೋಳಂತೂರು,
ವೆನ್ಲಾಕ್ ಆಸ್ಪತ್ರೆಯ ಆರ್ ಎಂ ಒ ಡಾಕ್ಟರ್ ಸುದಾಕರ್, ಸಹಾಯಕ ಆಡಳಿತಾಧಿಕಾರಿ ಪುಟ್ಟರಾಜು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ, ಬದ್ರುದ್ದೀನ್ ಅಝ್ಹರಿ ಕೈಕಂಬ, ಹಸನ್ ಪಾಂಡೇಶ್ವರ,ಇಸ್ಹಾಕ್ ಉಳ್ಳಾಲ, ಅಬ್ದುಲ್ ಹಕೀಂ ಪೂಮಣ್ಣು, ನಝೀರ್ ಹಾಜಿ ಲುಲು, ಅಶ್ರಫ್ ಮಂಗಳೂರು, ಕೆಸಿ ಸುಲೈಮಾನ್ ಮುಸ್ಲಿಯಾರ್ ಉಪಸ್ಥಿತರಿದ್ದರು.
ಇಸಾಬ ಸಾಂತ್ವನ ಜಿಲ್ಲಾ ಕಾರ್ಯದರ್ಶಿ ಉಮರುಲ್ ಫಾರೂಕ್ ಶೇಡಿಗುರಿ ಸ್ವಾಗತಿಸಿದರು,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಶರಫುಲ್ ಉಲಮಾ ಉಸ್ತಾದ್ 7ನೇ ವಾರ್ಷಿಕ ಅನುಸ್ಮರಣೆ – ಮೇ 13, 14 ರಂದು ಪ್ರಾರ್ಥನಾ ಸಂಗಮ
“ನಿಮ್ಮವರೇ ಹೀಗೆ” – ಕೆಎಸ್ಆರ್ಟಿಸಿ ನಿರ್ವಾಹಕನ ನಡತೆಗೆ ಶಿಕ್ಷಕಿಯ ಮನದ ಅಳಲು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?