ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಇದರ ಸನ್ನದ್ಧ ಸೇವಾ ತಂಡ ಸಾಂತ್ವನ -ಇಸಾಬ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಪ್ರವಾದಿ ಮುಹಮ್ಮದ್ ಪೈಗಂಬರ್ ಸಲ್ಲಲ್ಲಾಹು ಅಲೈಹಿ ರವರ 1500 ನೇ ಜನ್ಮ ದಿನವನ್ನು ಸ್ವಾಗತಿಸುವ ಸಲುವಾಗಿ ಜಿಲ್ಲಾ ಮಟ್ಟದ ಸ್ವಚ್ಚತಾ ಶಿಬಿರವನ್ನು ವೆನ್ಲಾಕ್ ಆಸ್ಪತ್ರೆಯ ಪರಿಸರವನ್ನು ಸ್ವಚ್ಛ ಗೊಳಿಸುವ ಮೂಲಕ ಉದ್ಘಾಟಿಸಲಾಯಿತು.
ವೆನ್ಲಾಕ್ ಆಸ್ಪತ್ರೆಯ ಡಿ ಎಂ ಒ ಡಾಕ್ಟರ್ ಶಿವಪ್ರಕಾಶ್ ರವರು ಶಿಬಿರವನ್ನು ಉದ್ಘಾಟಿಸಿ, ಸಮಾಜ ಸೇವೆ ಮಾಡಿದರೆ ಅದರಲ್ಲೂ ರೋಗಿಗಳ ಸೇವೆ, ಅವರು ಬರುವ ಆಸ್ಪತ್ರೆಯಲ್ಲಿ ಸೇವೆ ಮಾಡುವುದೆಂದರೆ ಪರಮಾತ್ಮನ ಕೃಪೆಯನ್ನು ಪಡೆಯಲಿಕ್ಕೆ ಸಾಧ್ಯವಿದೆ. ಎಸ್ ವೈ ಎಸ್ ಸಾಂತ್ವನ ಇಸಾಬ ತಂಡದವರು ಸ್ವಯಂ ಸೇವಕ ರಾಗಿ ಬಂದು ಶ್ರಮದಾನ ನಡೆಸುತ್ತಿರುವುದು ಅತ್ಯಂತ ಪ್ರಶಂಸನೀಯ ಎಂದು ಹೇಳಿದರು.
ಸ್ವಚ್ಚತಾ ಶಿಬಿರದಲ್ಲಿ 70ರಷ್ಟು ಇಸಾಬ ಕಾರ್ಯಕರ್ತರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಲು ಸಹಕರಿಸಿದರು.
ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಇದರ ಅಧ್ಯಕ್ಷ ಮಹಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆ ವಹಿಸಿದರು. ಇಸಾಬ ಸಾಂತ್ವನ ದಕ ಜಿಲ್ಲಾ ಮುಖ್ಯಸ್ಥ ಹಾಫಿಳ್ ಯಾಕೂಬ್ ಸಅದಿ ನಾವೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಎಸ್ ವೈ ಎಸ್ ರಾಜ್ಯ ಕೋಶಾಧಿಕಾರಿ ಮನ್ಸೂರ್ ಅಲಿ ಶಿವಮೊಗ್ಗ, ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷ
ಇಬ್ರಾಹಿಂ ಖಲೀಲ್ ಮಾಲಿಕಿ ಬೋಳಂತೂರು,
ವೆನ್ಲಾಕ್ ಆಸ್ಪತ್ರೆಯ ಆರ್ ಎಂ ಒ ಡಾಕ್ಟರ್ ಸುದಾಕರ್, ಸಹಾಯಕ ಆಡಳಿತಾಧಿಕಾರಿ ಪುಟ್ಟರಾಜು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ, ಬದ್ರುದ್ದೀನ್ ಅಝ್ಹರಿ ಕೈಕಂಬ, ಹಸನ್ ಪಾಂಡೇಶ್ವರ,ಇಸ್ಹಾಕ್ ಉಳ್ಳಾಲ, ಅಬ್ದುಲ್ ಹಕೀಂ ಪೂಮಣ್ಣು, ನಝೀರ್ ಹಾಜಿ ಲುಲು, ಅಶ್ರಫ್ ಮಂಗಳೂರು, ಕೆಸಿ ಸುಲೈಮಾನ್ ಮುಸ್ಲಿಯಾರ್ ಉಪಸ್ಥಿತರಿದ್ದರು.
ಇಸಾಬ ಸಾಂತ್ವನ ಜಿಲ್ಲಾ ಕಾರ್ಯದರ್ಶಿ ಉಮರುಲ್ ಫಾರೂಕ್ ಶೇಡಿಗುರಿ ಸ್ವಾಗತಿಸಿದರು,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ