ಬೆಂಗಳೂರು:(ಜನಧ್ವನಿ ವಾರ್ತೆ) ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಸ್ಕಾರ್ಫ್ ವಿಷಯದಲ್ಲಿ ವಿವಾದ ಉಂಟಾಗಿರುವುದು ಖೇದಕರ. ಇಂತಹ ಸೂಕ್ಷ್ಮ ವಿಚಾರಗಳು ವಿವಾದಕ್ಕೊಳಗಾಗದಂತೆ ಕಾಲೇಜು ಆಡಳಿತ ಮಂಡಳಿ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಈಲ್ ಸಖಾಫಿ ಕೊಡಗು ಆಗ್ರಹಿಸಿದ್ದಾರೆ. ವಿದ್ಯಾರ್ಥಿನಿಯರು ಹಾಗೂ ಹೆತ್ತವರ ಸಭೆ ಕರೆದು ಈ ವಿವಾದವನ್ನು ಸೌಹಾರ್ದಯುತವಾಗಿ ಪರಿಹರಿಸಲು ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕು. ವಿದ್ಯಾರ್ಥಿನಿಯರ ನ್ಯಾಯಯುತ ಬೇಡಿಕೆಗೆ ವಿರುದ್ಧವಾಗಿ ಆಡಳಿತ ಮಂಡಳಿಯು ಹೇಳಿಕೆ ಕೊಡುವುದರಿಂದ ವಿವಾದ ಇತ್ಯರ್ಥವಾಗುವುದಿಲ್ಲ. ಇಂತಹ ಸಂದರ್ಭಗಳ ದುರ್ಲಾಭ ಪಡೆಯಲು ರಾಜಕೀಯಪ್ರೇರಿತ ಶಕ್ತಿಗಳ ಅವಕಾಶ ಒದಗಿಸಿದಂತಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ವಿವಾದಗಳನ್ನು ಜಟಿಲಗೊಳಿಸಲು ಪ್ರಯತ್ನಿಸುವವರ ಬಗ್ಗೆ ನಾಗರಿಕರ ಜಾಗರೂಕರಾಗಿರಬೇಕು. ಅವರವರ ಧರ್ಮದ ವೇಶಭೂಷಣಕ್ಕೆ ದೇಶದ ಸಂವಿಧಾನ ಅವಕಾಶ ನೀಡಿದೆ. ಸಿಖ್ ಸಮುದಾಯದವರಿಗೆ ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಅವರ ವೇಶಭೂಷಣಕ್ಕೆ ಅವಕಾಶ ನೀಡಲಾಗುತ್ತಿದೆ. ಕ್ರೈಸ್ತ ಭಗಿನಿಯರು ತಮ್ಮದೇ ವಸ್ತ್ರಧಾರಣೆ ಹೊಂದಿರುತ್ತಾರೆ. ಅದರಂತೆ ಮುಸ್ಲಿಮ್ ಹೆಂಗಸರ ಪಾಲಿಗೆ ಸ್ಕಾರ್ಫ್ ಎನ್ನುವುದು ಧಾರ್ಮಿಕ ನಂಬಿಕೆಯ ಭಾಗವಾಗಿದೆ. ಆದುದರಿಂದ ಸ್ಕಾರ್ಫ್ ಗೆ ತರಗತಿಯೊಳಗೂ ಅವಕಾಶ ನಿರಾಕರಿಸುವುದು ಸಂವಿಧಾನ ವಿರೋಧಿ ನಡೆಯಾಗಿದೆ.
ಸಂಸ್ಥೆಯು ನಿಗದಿಪಡಿಸಿದ ಸಮವಸ್ತ್ರದ ಬಣ್ಣದ ಸ್ಕಾರ್ಫ್ ಧರಿಸಲು ವಿದ್ಯಾರ್ಥಿನಿಯರಿಗೆ ಸೂಚಿಸುವ ಮೂಲಕ ಈ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಬೇಕು ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ