ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಬುಧಾಬಿ ಝೋನ್ ಸಮಿತಿ ವತಿಯಿಂದ ಪ್ರವಾದಿ ಮುಹಮ್ಮದ್ ಸ 1500 ನೇ ಜನ್ಮ ದಿನದ ಸಂಭ್ರಮಾಚರಣೆಯ ಸಲುವಾಗಿ ನಡೆಯಲಿರುವ ಬೃಹತ್ ಮೀಲಾದ್ ಸಮಾವೇಶ, ಸೆಪ್ಟೆಂಬರ್ 6 ರಂದು ಮಗ್ರಿಬ್ ನಮಾಝಿನ ಬಳಿಕ ಅಬುಧಾಬಿ ನಗರದ ಇಂಡಿಯನ್ ಇಸ್ಲಾಮಿಕ್ ಸೆಂಟರ್ ಸಭಾ ಭವನದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಖ್ಯಾತ ವಾಗ್ಮಿ, ಡಾ. ಅಬ್ದುಲ್ ಸಲಾಂ ಮುಸ್ಲಿಯಾರ್ ದೇವರ್ಶೋಲ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳ ನಾಯಕರು ಭಾಗವಹಿಸಲಿದ್ದಾರೆ.
ಮೌಲಿದ್, ಬುರ್ದಾ ಮಜ್ಲಿಸ್ ಹಾಗೂ ನಹತೆ ಶರೀಫ್ ಕಾರ್ಯಕ್ರಮಗಳು ನಡೆಯಲಿದ್ದು ಪ್ರವಾದಿ ಪ್ರೇಮಿಗಳ ಸ್ವಾಗತಕ್ಕಾಗಿ ಕೆಸಿಎಫ್ ಅಬುಧಾಬಿ ಸ್ವಯಂ ಸೇವಕ ತಂಡಗಳು ಆಹೋರಾತ್ರಿ ದುಡಿಯುತ್ತಿದೆ.
ಈ ಕುರಿತು ವಿವರಿಸಲು ಅಬುಧಾಬಿ ಕೆಸಿಎಫ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಝೋನ್ ಸಮಿತಿ ಅಧ್ಯಕ್ಷ ಕಬೀರ್ ಬಾಯಂಬಾಡಿ, ಕಾರ್ಯದರ್ಶಿ ಉಮರ್ ಈಶ್ವರ ಮಂಗಿಲ, ಸ್ವಾಗತ ಸಮಿತಿಯ ಚಿಯರ್ಮಾನ್ ಮುಹಮ್ಮ ಅಲಿ ಹಾಜಿ ಬ್ರೈಟ್, ಖಜಾಂಜಿ ಹಮೀದ್
ಭಾಗವಹಿಸಿ, ಸರ್ವ ಪ್ರವಾದಿ ಪ್ರೇಮಿಗಳು ಕಾರ್ಯಕಾಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕರೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)