“ಪ್ರವಾದಿ ﷺ ರವರು ಕಾಲಾತೀತ ಮಾರ್ಗದರ್ಶಿ” ಎಂಬ ಘೋಷ ವಾಕ್ಯದೊಂದಿಗೆ ಪ್ರವಾದಿ ﷺ ರವರ 1500 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಸಿಎಫ್ ಮುಹರ್ರಕ್ ಸೆಕ್ಟರ್ ವತಿಯಿಂದ ಉಮ್ಮುಲ್ ಹಸ್ಸಂ ಬ್ಯಾಂಕ್ ಕೋಂಗ್ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ ಕಾರ್ಯಕ್ರಮವು ಹಾರಿಸ್ ಒಕ್ಕೆತ್ತೂರ್ ರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಸಿದ್ದೀಖ್ ಉಸ್ತಾದರು ದುಆಗೖದರು. ಐಸಿಎಫ್ ನಾಯಕರಾದ ಅಝ್ಹರ್ ತಂಙಳ್ ರವರು ಮೌಲಿದ್ ಮಜ್ಲಿಸಿಗೆ ನೇತೃತ್ವ ನೀಡಿದರು. ಶಾಕಿರ್ ಪೖಂಬಚ್ಚಾಲ್ ಖಿರಾಅತ್ ಪಠಿಸಿದರು. ರಾಷ್ಟ್ರೀಯ ಸಮಿತಿ ಎಕ್ಸಿಕ್ಯೂಟಿವ್ ಸದಸ್ಯರಾದ ಅಬೂಬಕರ್ ಮದನಿ ಉಸ್ತಾದ್ ಮಂಚಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ನೋರ್ತ್ ಝೋನ್ ಅಧ್ಯಕ್ಷರಾದ ಅಹ್ಮದ್ ಮುಸ್ಲಿಯಾರ್ ಗಟ್ಟಮನೆ, ಐಸಿಎಫ್ ಪಬ್ಲಿಕೇಶನ್ ಕಾರ್ಯದರ್ಶಿ ಅಬ್ದುಸ್ಸಮದ್ ಕಕ್ಕಡವು ಕಾರ್ಯಕ್ರಮಕ್ಕೆ ಶುಭ ಹಾರೖಸಿದರು.
ಲೋಕಕ್ಕೆ ಶಾಂತಿಯನ್ನು ಹಾಗೂ ಸಮಾಧಾನದ ಸಂದೇಶವನ್ನು ನೀಡಿದ ಪ್ರವಾದಿ ﷺ ರು ಪ್ರತಿಯೊಂದು ಜೀವಿಗಳಲ್ಲಿಯೂ ಕಾರುಣೆ ತೋರುತ್ತಿದ್ದರು. ಯಾರನ್ನೂ ಕೂಡಾ ಅಕ್ರಮಿಸುವುದಾಗಲೀ, ಉಪದ್ರವಿಸುವುದಾಗಲೀ ಅವರಿಂದ ಉಂಟಾಗಲಿಲ್ಲ, ಮಾತ್ರವಲ್ಲ ಅದನ್ನು ಅವರು ವಿರೋಧಿಸುತ್ತಿದ್ದರು ಎಂದು ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ ಕರ್ನಾಟಕ ಸುನ್ನೀ ಜಂಇಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಬಹು. ಟಿ. ಎಂ. ಮುಹ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ ಉಸ್ತಾದರು ಹೇಳಿದರು.
ಕೆಸಿಎಫ್ ರಾಷ್ಟ್ರೀಯ, ಝೋನಲ್, ಸೆಕ್ಟರ್, ಯೂನಿಟ್’ಗಳ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ನೋರ್ತ್ ಝೋನ್ ಸಂಘಟನಾ ಕಾರ್ಯದರ್ಶಿ ರಶೀದ್ ಈಶ್ವರಮಂಗಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟೀಯ ಸಮಿತಿ ವೃತ್ತಿಪರ ಇಲಾಖೆ ಕಾರ್ಯದರ್ಶಿ ಲತೀಫ್ ಪೆರೋಲಿ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)